ಕೊಪ್ಪಳ | ಹುಳು ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ; ಬಡವರ ಆರೋಗ್ಯದ ಜತೆಗೆ ಆಹಾರ ಇಲಾಖೆ ಚೆಲ್ಲಾಟ

Date:

Advertisements

ಹುಳುವಿನಿಂದ ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ ಮಾಡಿದ್ದು, ನ್ಯಾಯಬೆಲೆ ಅಂಗಡಿಯವರು ಹಾಗೂ ಸರ್ಕಾರ ಬಡವರ ಆರೋಗ್ಯದ ಜತೆಗೆ ಚಲ್ಲಾಟ ಆಡುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ಈಳಿಗನೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸುಮಾರು 650ಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಬಡವರಿದ್ದಾರೆ. ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಪಡಿತರ ಆಹಾರ ಧಾನ್ಯವನ್ನೇ ನಂಬಿದ ಕುಟುಂಬಗಳಿವೆ. ಆದರೆ ಇಲ್ಲಿನ ಆಹಾರ ಧಾನ್ಯ ವಿತರಕರು ತುಂಬಾ ಕಳಪೆ ಮಟ್ಟದ ಅಕ್ಕಿ, ಜೋಳ ವಿತರಿಸುತ್ತಿದ್ದು, ಅದರಲ್ಲಿ ಕಲ್ಲು, ಮಣ್ಣು, ಧೂಳು ಅಷ್ಟೇ ಅಲ್ಲದೆ ಹುಳುಗಳ ಮಯವಾಗಿರುವ ಪಡಿತರ, ಬಳಕೆಗೆ ಯೋಗ್ಯವಿಲ್ಲದಂತಾಗಿದೆ” ಎಂದು ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪಡಿತರ 1 1

ಸ್ಥಳೀಯ ಯುವಕರು, ಪಡಿತರ ವಿತರಕರನ್ನು ಪ್ರಶ್ನಿಸಿದರೂ ಕೂಡಾ ಯಾವುದೇ ರೀತಿಯ ಉತ್ತರ ನೀಡದೆ ನಮಗೂ ಇದಕ್ಕೂ ಸಂಬಂಧವೇ ಇಲ್ಲವೆನ್ನುವಂತೆ ವರ್ತಿಸಿದ್ದಾರೆ.

Advertisements

ಪಡಿತರ ಫಲಾನುಭವಿಗಳು ವಿಷಕಾರಿ ಆಹಾರದ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾದರೆ ಅದಕ್ಕೆ ಆಹಾರ ಇಲಾಖೆಯೇ ನೇರಹೊಣೆಯಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ₹6 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದಲ್ಲಿ ಹುಳು ಪತ್ತೆ; ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ

ಬಳ್ಳಾರಿಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ(ಕೆಎಸ್‌ಡಬ್ಲ್ಯೂಸಿ) ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಸುಮಾರು 24,000 ಕ್ವಿಂಟಾಲ್‌ ಜೋಳ ಸೇವನೆಗೆ ಯೋಗ್ಯವಲ್ಲವೆಂದು ತಿಳಿದುಬಂದಿತ್ತು. ಹುಳು ಬಿದ್ದಿರುವ ಜೋಳವನ್ನು ಬಳ್ಳಾರಿ ಜಿಲ್ಲೆ ಮತ್ತು ಸುತ್ತಮುತ್ತಲಿನ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸಲಾಗುತ್ತಿದೆಯೆಂದು ಈಗಾಗಲೇ ಈ ದಿನ.ಕಾಮ್ ವರ‌ದಿ ಪ್ರಕಟಿಸಿತ್ತು. ಅಂತೆಯೇ ದನಕರುಗಳೂ ತಿನ್ನಲು ಯೋಗ್ಯವಿಲ್ಲದಂತಹ ಆಹಾರ ಧಾನ್ಯಗಳನ್ನು ಜನರಿಗೆ ನೀಡಿರುವುದು ಖಂಡಿನೀಯ.

ಈ ಸುದ್ದಿ ಓದಿದ್ದೀರಾ? ‘ನನ್ನ ಕಿಡ್ನಿ ಮಾರಿದ್ದೇನೆ, ಮಕ್ಕಳ ಕಿಡ್ನಿಯನ್ನೂ ಮಾರುವಂತೆ ಒತ್ತಾಯಿಸುತ್ತಿದ್ದಾರೆ’; ಮೈಕ್ರೋಫೈನಾನ್ಸ್‌ ಕಿರುಕುಳ ಬಿಚ್ಚಿಟ್ಟ ಮಹಿಳೆ

ಇಳಗನೂರು ಗ್ರಾಮದಲ್ಲಿ ದನಗಳು ತಿನ್ನುವುದಕ್ಕೂ ಯೋಗ್ಯವಲ್ಲದ ಕಳಪೆ ಪಡಿತರ ಜೋಳ, ಅಕ್ಕಿಯನ್ನು ಬಡವರಿಗೆ ವಿತರಿಸಿರುವುದರ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಗ್ರಾಮದ ಕಾನೂನು ವಿದ್ಯಾರ್ಥಿ ಯಮನೂರಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ವಿಡಿಯೋ ವೈರಲ್ ಆಗಿದ್ದರೂ ಕೂಡ ಸಂಬಂಧಿಸಿದ ಇಲಾಖೆಯ ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿಕೊಟ್ಟು ಸೂಕ್ತ ಕ್ರಮ ತೆಗೆದುಕೊಂಡಿರುವುದಿಲ್ಲ. ಇದರಿಂದ ಆಹಾರ ಇಲಾಖೆಯ ನಿರ್ಲಕ್ಷ್ಯ ಧೋರಣೆ ಎದ್ದು ತೋರುತ್ತಿದೆ. ತೆರಿಗೆದಾರರ ಹಣವನ್ನು ಬಳಸಿ ಜೋಳವನ್ನು ಖರೀದಿಸಲಾಗಿದ್ದು, ಅದನ್ನು ಈ ರೀತಿ ವ್ಯರ್ಥ ಮಾಡಬಾರದು. ಸರ್ಕಾರದ ಅನ್ನಭಾಗ್ಯ ಯೋಜನೆಯು ದುರಪಯೋಗವಾಗುತ್ತಿರುವುದು ಕಂಡುಬರುತ್ತಿದೆ” ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X