ಕೊಪ್ಪಳ | ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಚಾಲಕರ ದಿನಾಚರಣೆ

Date:

Advertisements

ನಿತ್ಯ ಸಾರ್ವಜನಿಕರಿಗೆ ಗಮ್ಯಸ್ಥಾನ ತಲುಪಿಸಲು ಶ್ರಮಿಸುವ ಚಾಲಕರ ಕಠಿಣ ಪರಿಶ್ರಮ ಮತ್ತು ಸೇವೆಯನ್ನು ಗೌರವಿಸಲು ಚಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಜನಪರ‌ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್‌ ಎಲ್ಲ ಚಾಲಕರಿಗೂ ಚಾಲಕರ ದಿನಾಚರಣೆಯ ಶುಭಾಶಯ ತಿಳಿಸಿದರು.

ಕೊಪ್ಪಳ ಜಿಲ್ಲಾ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸರಳವಾಗಿ ನಡೆದ ಚಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಶಯ ಕೋರಿ, “ರಸ್ತೆ ಸುರಕ್ಷೆ, ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಚಾಲಕರನ್ನು ಪ್ರೋತ್ಸಾಹಿಸಲು ಹಾಗೂ ಚಾಲಕರ ಸೇವೆಗೆ ಗೌರವ ಸಲ್ಲಿಸಲು ಈ ದಿನವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರಿಗೂ ಶೂಭಾಷಯಗಳು” ಎಂದರು.

ಹಗಲು ರಾತ್ರಿ ಎನ್ನದೆ ಸೇವೆ ಸಲ್ಲಿಸುವ ಚಾಲಕರಿಗೆ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಭಾಗವಹಿಸಿ ಶುಭ ಹಾರೈಸಿದರು.

Advertisements
ಚಾಲಕರ ದಿನಾಚರಣೆ

ನಿರಂತರ ಪ್ರಯತ್ನದ ಮೂಲಕ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಎರಡನೇ ವರ್ಷ ಚಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಶಾಲು ತಾಯಿ ಸಂಚಾರಿ ನಿಯಂತ್ರಕ ರವೀಂದ್ರ ನುಡಿದು ಚಾಲಕರಿಗೆ ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲನಚಿತ್ರೋತ್ಸವ ಮುಂದೂಡುವಂತೆ ನಾವು ದ್ರಾವಿಡ ಕನ್ನಡಿಗರು ಚಳವಳಿ ಮನವಿ

ಅಧ್ಯಕ್ಷತೆ ವಹಿಸಿದ್ದ ಡಿಪೋ ವ್ಯವಸ್ಥಾಪಕ ರಮೇಶ ಚಿಣಗಿ ಅವರು ಚಾಲಕರಿಗೆ ಶುಭಾಶಯಗಳನ್ನು ಹೇಳಿದರು.

ಕೇಂದ್ರೀಯ ಬಸ್ ನಿಲ್ದಾಣದ ಕಾರ್ಯಕ್ರಮದಲ್ಲಿ ಅಮೀನ್ ಸಾಬ್ ಕೋಳಿ, ಚೆನ್ನಮ್ಮ, ವಿಭಾಗೀಯ ನಿಯಂತ್ರಣಾಧಿಕಾರಿ ಎಂ ವೆಂಕಟೇಶ್, ವಿಭಾಗಿಯ ಸಂಚಾಲನ ಅಧಿಕಾರಿ ಆರ್ ಬಿ ಜಾಧವ್, ಚಾಲಕ ವಸಂತ ರಾಮದುರ್ಗ, ಅನಿಲ್ ಕುಮಾರ್, ಲೆಕ್ಕಾಧಿಕಾರಿ ಜಯಶ್ರೀ, ಕಾವ್ಯ, ಸಂಚಾರ ನಿರೀಕ್ಷಕ ಮಂಜುನಾಥ್ ಬಂಡಿ, ನಾಗರಾಜ ನಾಗರೆಡ್ಡಿ, ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಮುಖಂಡ ಎ ಜಿ ಮಣ್ಣೂರು ಮುಂತಾದ ಕೆಎಸ್‌ಆರ್‌ಟಿಸಿ ಚಾಲಕರು, ನಿರ್ವಾಹಕರು, ಕಾರ್ಮಿಕರು ಭಾಗವಹಿಸಿ ಚಾಲಕರಿಗೆ ಶುಭಾಶಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X