ಕೊಪ್ಪಳ | ಮನರೇಗಾ ಕಾಮಗಾರಿ ಸ್ಥಳದಲ್ಲಿ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮ

Date:

Advertisements

ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ನಡುವಲಕೊಪ್ಪದಲ್ಲಿ ಮನರೇಗಾ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮ ನಡೆಯಿತು.

ಕುಷ್ಟಗಿಯ ಜನಜಾಗೃತಿ ಕಲಾರಂಗ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ 2023-24ನೇ ಸಾಲಿನ ಸಂಘ-ಸಂಸ್ಥೆಗಳ ಧನಸಹಾಯ ಯೋಜನೆಯಡಿಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬಾಬುನಾಯಕ ಮೇಟಿ ಅವರು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು.

“ನಾವು ದಿನ ನಿತ್ಯದ ಬದುಕಿನಲ್ಲಿ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಇಲ್ಲದೇ ಪರದಾಡುತ್ತೇವೆ. ಇಂತಹ ಸಂಸ್ಥೆಗಳು ಕಲಾತಂಡದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯವಾಗಿದೆ. ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಬಾಬುನಾಯಕ ಹೇಳಿದರು.

Advertisements

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೀರಯ್ಯ ಹಿರೇಮಠ ಅವರಿಂದ ಜಾಗೃತಿ ಗೀತೆ, ಬನ್ನಿಗೋಳ ಶರಣಪ್ಪ ಅವರಿಂದ ಬಯಲಾಟದ ಪದ, ದೇವೇಂದ್ರಪ್ಪ ಕಮ್ಮಾರ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಿತು. ಶಿವಲಿಂಗಪ್ಪ ಪೂಜಾರ ಸಂಗಡಿಗರಿಂದ ‘ಕೂಲಿಯ ಬಿಡಿಸಿ ಶಾಲೆಗೆ ಕಳಿಸಿ’ ಶೈಕ್ಷಣಿಕ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶನ ನಡೆಯಿತು.

ಇದನ್ನೂ ಓದಿ: ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಇಬ್ಬರ ಬಂಧನ

ಕಾರ್ಯಕ್ರಮದಲ್ಲಿ ನರಸಪ್ಪ ನಾಯಕ, ದೊಡ್ಡಮ್ಮ ನಾಯಕ, ಮೌನೇಶ ನಾಯಕ, ರಾಚಪ್ಪ ಬಡಿಗೇರ, ಹನಮಪ್ಪ ನಾಯಕ, ರೂಪಲೆಪ್ಪ ನಾಯಕ ಸೇರಿದಂತೆ ಮನರೇಗಾ ಕಾರ್ಮಿಕರು, ಕೇಸೂರು ಗ್ರಾಮ ಪಂಚಾಯತಿ ಸಿಬ್ಬಂದಿ ಮಾಸಪ್ಪ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X