ಕೊಪ್ಪಳ | ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಬಳಿಕ ಚುನಾವಣೆ ಘೋಷಿಸಬೇಕು: ಕಾಶ್ಯಪ್ಪ ಛಲವಾದಿ

Date:

Advertisements

ಈ ಬಾರಿ ಜಿ.ಪಂ, ತಾ.ಪಂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇರುವುದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಅದ್ದೂರಿಯಾಗಿ ಡಾ ಬಿ ಆರ್‌ ಅಂಬೇಡ್ಕರ್ ಜಯಂತಿ ಆಚರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಏಪ್ರಿಲ್ 14ರಂದು ಅಂಬೇಡ್ಕರ್‌ ಜಯಂತಿ ಮುಗಿದ ಬಳಿಕ ಚುನಾವಣೆ ಘೋಷಣೆ ಮಾಡಿ ಎಂದು ಭಾರತೀಯ ಭೀಮಾ ಸೇನಾ ಜಿಲ್ಲಾಧ್ಯಕ್ಷ ಕಾಶ್ಯಪ್ಪ ಛಲವಾದಿ ಆಗ್ರಹಿಸಿದರು.

ಕೊಪ್ಪಳ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, “ಪ್ರತಿವರ್ಷ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಸಮಯದಲ್ಲೇ ಚುನಾವಣೆಗಳು ಘೋಷಣೆಯಾಗುತ್ತಿದ್ದು, ಚುನಾವಣೆ ನೀತಿ ಸಂಹಿತೆ ಇರುತ್ತಿದ್ದುದರಿಂದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ, ಇಲಾಖೆಗಳಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಿಸಲು ಸಾಧ್ಯಾವಾಗುತ್ತಿಲ್ಲ. ಹಾಗಾಗಿ ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಗಳು ಅದ್ದೂರಿಯಾಗಿ ಅಂಬೇಡ್ಕರ್‌ ಜಯಂತಿ ಆಚರಣೆ ಮಾಡಲು ಆಶಾಭಾವುಕರಾಗಿದ್ದರೂ ಸಹಿತ ಕಳೆದ ಮೂರು ವರ್ಷಗಳ ಹಿಂದೆ 2019-20ನೇ ವರ್ಷ ಮಹಾಮಾರಿ ಕೋವಿಡ್ 19 ರೋಗ ಬಂದು 2ವರ್ಷ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಖಂಡಿಸಿ ದಸಂಸದಿಂದ ರಸ್ತೆತಡೆ

Advertisements

“2020ರ ನಂತರ ವಿಧಾನಸಭಾ ಚುನಾವಣೆಗಳು ಬಂದವು. ಇದೇ ರೀತಿ ಮುಂಬರುವ ಈ ಬಾರಿ ಜಿಪಂ, ತಾಪಂ, ಚುನಾವಣೆ ಬರುತ್ತವೆ. ಹಾಗಾಗಿ ಅಂಬೇಡ್ಕರ್‌ ಜಯಂತಿ ಮುಗಿಯುವವರೆಗೂ ಚುನಾವಣೆ ಘೋಷಣೆ ಮಾಡದಂತೆ ಸಿಎಂ ಸಿದ್ದರಾಮಯ್ಯನವರು ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ ಬಿ ಗೋನಾಳ, ಮುದಕಪ್ಪ, ಎಂ ಹೊಸಮನಿ, ಕಿರಣ ಬಂಗಾಳಿಗಿಡದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X