ಕೊಪ್ಪಳ | ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ; ಲೋಕ ಅದಾಲತ್‌ನಲ್ಲಿ ಒಂದಾದ ಆರು ಜೋಡಿ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿಗಳು ಒಂದಾಗಿದ್ದು, ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ.

- Advertisement -

ಗಂಗಾವತಿ ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಆರು ಜೋಡಿಗಳು ಒಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಜಗಳ, ವಿವಾದ, ಮನೆ ಸಮಸ್ಯೆಗಳಿಗೆ ಬೇಸತ್ತು 6 ಜೋಡಿಗಳು ವಿಚ್ಛೇದನ ಕೋರಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು. ನ್ಯಾಯಾಧೀಶರು ಮತ್ತು ವಕೀಲರು, 6 ಜೋಡಿಗಳಿಗೆ ಬುದ್ಧಿಮಾತು ಹೇಳಿ, ವಿಚ್ಛೇದನ ಸಮಯವನ್ನು ಮುಂದಕ್ಕೆ ಹಾಕುತ್ತ ಮನವೋಲಿಸಿದ್ದು, ಇದೀಗ ದಂಪತಿಯನ್ನು ಒಟ್ಟುಗೂಡಿಸಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಹುಲಿಹೈದರ್ ಗ್ರಾಮದ ಭರಮಣ್ಣ, ಅಂಬಮ್ಮ, ಜಂಗಮರ ಕಲ್ಗುಡಿ ಗ್ರಾಮದ ಶಿವಮ್ಮ, ಗುಲಪ್ಪ(2 ವರ್ಷ), ಸಿದ್ದಾಪುರ ಗ್ರಾಮದ ರಾಘವೇಂದ್ರ, ಎಂ. ತ್ರಿವೇಣಿ, ಬಾಗಲಕೋಟೆ ರಾಜೇಶ, ಜ್ಯೋತಿ, ಚಿಕ್ಕಡಂಕನಕಲ್ ಗ್ರಾಮದ ಬಸವರಾಜ, ಲಕ್ಷ್ಮಿ, ಗೋಡಿನಾಳದ ಶಿವಲಿಂಗಮ್ಮ, ಮುತ್ತಣ್ಣ ಎಂಬ ದಂಪತಿಗಳು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ಒಟ್ಟು 9,493 ಬಾಕಿ ಪ್ರಕರಣಗಳಿದ್ದು, ರಾಷ್ಟ್ರೀಯ ಲೋಕ ಆದಾಲತ್‌ನಲ್ಲಿ ಅಪಘಾತ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ ವಸೂಲಿ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್, ಜನನ ಪ್ರಕರಣ, ಕ್ರಿಮಿನಲ್ ಪ್ರಕರಣ ಸೇರಿದಂತೆ ಒಟ್ಟು 1,796 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಆಹ್ವಾನಿಸಿದ್ದರು. ಆದರೆ 4 ನ್ಯಾಯಾಲಯಗಳಲ್ಲಿ ಸೇರಿ ಮೋಟಾರು ವಾಹನ, ಬ್ಯಾಂಕ್, ಜನನ-ಮರಣ, ಚೆಕ್ ಬೌನ್ಸ್, ಕ್ರಿಮಿನಲ್, ವೈವಾಹಿಕ 1,160 ಪ್ರಕರಣಗಳು ಮಾತ್ರ ಇತ್ಯರ್ಥವಾಗಿವೆ. 4 ನ್ಯಾಯಾಲಯಗಳಲ್ಲಿ ಸೇರಿ ಒಟ್ಟು ₹7,45,91,771 ಹಣವನ್ನು ಸರ್ಕಾರಕ್ಕೆ ಜಮಾ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಲೋಕ ಅದಾಲತ್;‌ 2,680 ಪ್ರಕರಣಗಳ ಪೈಕಿ 1,345 ಪ್ರಕರಣ ಇತ್ಯರ್ಥ

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸದಾನಂದ ನಾಗಪ್ಪ ನಾಯ್ಕ, ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶ ರಮೇಶ ಎಸ್.ಗಾಣಿಗೇರಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಶ್ರೀದೇವಿ ದರ್ಬಾರೇ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಪಾಟೀಲ ಸೇರಿದಂತೆ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಸೇರಿ ವಕೀಲರು, ಅರ್ಜಿದಾರರು, ಎಸ್‌ಬಿಐ ಬ್ಯಾಂಕ್, ಕೆನರಾ ಬ್ಯಾಂಕ್, ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...