ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

Date:

Advertisements

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ(21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಮರಿಯಮ್ಮ ಹಾಗೂ ಹನುಮಯ್ಯ ಇಬ್ಬರು ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮರಿಯಮ್ಮ ಮೂಲತ ಅಗೋಲಿ ಗ್ರಾಮದವರು. ವಿಠಲಾಪುರ ಗ್ರಾಮದಲ್ಲಿ ಅಜ್ಜಿ ಮನೆ ಇರುವುದರಿಂದ ಅವಾಗವಾಗ ಮನೆಗೆ ಬಂದು ಹೋಗುತ್ತಿದ್ದಳು. ಈ ವೇಳೆ ಗ್ರಾಮದ ಯುವಕ ಹನುಮಯ್ಯ ಪರಿಚಯವಾಗಿತ್ತು.‌ಈ ಪರಿಚಯ ಪ್ರೀತಿಗೆ ತಿರುಗಿತ್ತು.

Advertisements
1001541306

ಹನುಮಯ್ಯ ಎಸ್ ಟಿ ಸಮುದಾಯಕ್ಕೆ ಸೇರಿದ ಯುವಕ. ಅಂತರ್ಜಾತಿಯ ಕಾರಣದಿಂದಾಗಿ ಮರಿಯಮ್ಮ ಹಾಗೂ ಹನುಮಯ್ಯ 2023ರ ಏಪ್ರಿಲ್‌ನಲ್ಲಿ ತಮ್ಮ ಕುಟುಂಬದವರನ್ನು ಒಪ್ಪಿಸಿ, ಬಳಿಕ ಗಂಗಾವತಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ನಂತರ ಯುವಕನ ಮನೆಯಲ್ಲಿ ಜಾತಿ ಸಂಬಂಧ ಯುವತಿಗೆ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.‌ ಅಲ್ಲದೇ, ವರದಕ್ಷಿಣೆ ತರುವಂತೆ ಕೂಡ ಪೀಡಿಸುತ್ತಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ.

ಯುವತಿ ಮಾದಿಗ ಸಮುದಾಯಕ್ಕೆ ಸೇರಿದವಳೆಂಬ ಎಂಬ ಕಾರಣಕ್ಕೆ ಮನೆಯ ಸಮೀಪವೇ ಬೇರೆಯೇ ಶೆಡ್ ಹಾಕಿ ಅಡುಗೆ ಮಾಡುವಂತೆ ಸೂಚಿಸಿದ್ದಲ್ಲದೇ, ನಾವು ಯಾರೂ ನೀನು ಮಾಡಿದ ಅಡುಗೆ ತಿನ್ನಲಾರೆವು ಎಂದು ಅಸ್ಪೃಶ್ಯತೆ ಆಚರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ಎಲ್ಲದಕ್ಕೂ ಜಾತಿಯ ಕಾರಣವೊಡ್ಡಿ ಕುಟುಂಬದಿಂದ ದೂರವಿಟ್ಟು, ಹಿಂಸೆ ನೀಡುತ್ತಿದ್ದರು ಎಂದು ಯುವತಿ ಮರಿಯಮ್ಮ ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

ಈ ನಡುವೆ ಯುವತಿಗೆ ಯುವಕನ ಕುಟುಂಬದ ಮಂದಿ ಬರ್ಬರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಯುವತಿಯ ಸಾವಾಗಿದೆ. ಕೊಲೆ ಮಾಡಿದ ಬಳಿಕ ಯಾವುದೇ ಅನುಮಾನ ಬಾರದಿರಲು ವಿಷವುಣಿಸಿದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.

ಆ ಬಳಿಕ ಯುವಕನ ಕುಟುಂಬದವರು ಯುವತಿಯ ಕುಟುಂಬಕ್ಕೆ ಕರೆ ಮಾಡಿ, ‘ನಿಮ್ಮ ಮಗಳು ಜಮೀನಿನಲ್ಲಿ ವಿಷ ಕುಡಿದಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದೆವು. ಅಲ್ಲಿ ಆಕೆಯ ಸಾವಾಗಿದೆ’ ಎಂದು ತಿಳಿಸಿರುವುದಾಗಿ ಯುವತಿಯ ತಂದೆ ಗಂಗಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವಿಷಯ ತಿಳಿದ ನಂತರ ವಿಠಲಾಪುರ ಗ್ರಾಮಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿದ್ದು, ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ, ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.‌

ಯುವತಿಯ ತಂದೆ ಗಾಳೆಪ್ಪ, ಯುವಕನ ಕುಟುಂಬದ 13 ಮಂದಿಯ ಮೇಲೆ ಕೊಲೆ ಆರೋಪ ಹೊರಿಸಿದ್ದರಿಂದ ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X