ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

Date:

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ಈ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ(21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮರಿಯಮ್ಮ ಹಾಗೂ ಹನುಮಯ್ಯ ಇಬ್ಬರು ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮರಿಯಮ್ಮ ಮೂಲತ ಅಗೋಲಿ ಗ್ರಾಮದವರು. ವಿಠಲಾಪುರ ಗ್ರಾಮದಲ್ಲಿ ಅಜ್ಜಿ ಮನೆ ಇರುವುದರಿಂದ ಅವಾಗವಾಗ ಮನೆಗೆ ಬಂದು ಹೋಗುತ್ತಿದ್ದಳು. ಈ ವೇಳೆ ಗ್ರಾಮದ ಯುವಕ ಹನುಮಯ್ಯ ಪರಿಚಯವಾಗಿತ್ತು.‌ಈ ಪರಿಚಯ ಪ್ರೀತಿಗೆ ತಿರುಗಿತ್ತು.

1001541306

ಹನುಮಯ್ಯ ಎಸ್ ಟಿ ಸಮುದಾಯಕ್ಕೆ ಸೇರಿದ ಯುವಕ. ಅಂತರ್ಜಾತಿಯ ಕಾರಣದಿಂದಾಗಿ ಮರಿಯಮ್ಮ ಹಾಗೂ ಹನುಮಯ್ಯ 2023ರ ಏಪ್ರಿಲ್‌ನಲ್ಲಿ ತಮ್ಮ ಕುಟುಂಬದವರನ್ನು ಒಪ್ಪಿಸಿ, ಬಳಿಕ ಗಂಗಾವತಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ನಂತರ ಯುವಕನ ಮನೆಯಲ್ಲಿ ಜಾತಿ ಸಂಬಂಧ ಯುವತಿಗೆ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.‌ ಅಲ್ಲದೇ, ವರದಕ್ಷಿಣೆ ತರುವಂತೆ ಕೂಡ ಪೀಡಿಸುತ್ತಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ.

ಯುವತಿ ಮಾದಿಗ ಸಮುದಾಯಕ್ಕೆ ಸೇರಿದವಳೆಂಬ ಎಂಬ ಕಾರಣಕ್ಕೆ ಮನೆಯ ಸಮೀಪವೇ ಬೇರೆಯೇ ಶೆಡ್ ಹಾಕಿ ಅಡುಗೆ ಮಾಡುವಂತೆ ಸೂಚಿಸಿದ್ದಲ್ಲದೇ, ನಾವು ಯಾರೂ ನೀನು ಮಾಡಿದ ಅಡುಗೆ ತಿನ್ನಲಾರೆವು ಎಂದು ಅಸ್ಪೃಶ್ಯತೆ ಆಚರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ಎಲ್ಲದಕ್ಕೂ ಜಾತಿಯ ಕಾರಣವೊಡ್ಡಿ ಕುಟುಂಬದಿಂದ ದೂರವಿಟ್ಟು, ಹಿಂಸೆ ನೀಡುತ್ತಿದ್ದರು ಎಂದು ಯುವತಿ ಮರಿಯಮ್ಮ ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

ಈ ನಡುವೆ ಯುವತಿಗೆ ಯುವಕನ ಕುಟುಂಬದ ಮಂದಿ ಬರ್ಬರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಯುವತಿಯ ಸಾವಾಗಿದೆ. ಕೊಲೆ ಮಾಡಿದ ಬಳಿಕ ಯಾವುದೇ ಅನುಮಾನ ಬಾರದಿರಲು ವಿಷವುಣಿಸಿದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.

ಆ ಬಳಿಕ ಯುವಕನ ಕುಟುಂಬದವರು ಯುವತಿಯ ಕುಟುಂಬಕ್ಕೆ ಕರೆ ಮಾಡಿ, ‘ನಿಮ್ಮ ಮಗಳು ಜಮೀನಿನಲ್ಲಿ ವಿಷ ಕುಡಿದಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದೆವು. ಅಲ್ಲಿ ಆಕೆಯ ಸಾವಾಗಿದೆ’ ಎಂದು ತಿಳಿಸಿರುವುದಾಗಿ ಯುವತಿಯ ತಂದೆ ಗಂಗಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವಿಷಯ ತಿಳಿದ ನಂತರ ವಿಠಲಾಪುರ ಗ್ರಾಮಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿದ್ದು, ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ, ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.‌

ಯುವತಿಯ ತಂದೆ ಗಾಳೆಪ್ಪ, ಯುವಕನ ಕುಟುಂಬದ 13 ಮಂದಿಯ ಮೇಲೆ ಕೊಲೆ ಆರೋಪ ಹೊರಿಸಿದ್ದರಿಂದ ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...