ಕೊಪ್ಪಳ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಜಿಐಒ ಒತ್ತಾಯ

Date:

Advertisements

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸ್‌ ಕೊಪ್ಪಳದ ಗಂಗಾವತಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.

ಈ ವೇಳೆ ಹುಮೆರಾ ಸಿದ್ದಿಕಿ ಮಾತನಾಡಿ, “ಈ ಕಾಯ್ದೆಯು ವಕ್ಫ್ ಸಂಘಗಳ ಸಮರ್ಥನೆ ಹಾಗೂ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವ ನಿಯಮಗಳನೊಳಗೊಂಡಿದ್ದು, ಇದರಿಂದ ನಮ್ಮ ಸಮುದಾಯದ ಜನರಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಹೇಳಿದರು.

ಹಮಾತೆ ಇಸ್ಲಾಮಿನ ಮಾಜಿ ಮಹಿಳಾ ಅಧ್ಯಕ್ಷೆ ಸಾಲಿಹ ಬೇಗಂ ಮಾತನಾಡಿ, “ಧಾರ್ಮಿಕ ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದ ಐತಿಹಾಸಿಕವಾಗಿ ದತ್ತಿ ಭೂಮಿಯನ್ನು ಅಪಾಯಕ್ಕೆ ಸಿಲುಕಿಸುವದು ಈ ಕಾಯ್ದೆಯ ಹಿಂದಿನ ಉದ್ದೇಶವಾಗಿದ್ದು, ಇದು ಕರಾಳ ಕಾನೂನು ಆಗಿದೆ. ಅಲ್ಪಸಂಖ್ಯಾತರನ್ನು ಕುಗ್ಗಿಸುವ ಹಾಗೂ ಸಂವಿಧಾನ ವಿರೋಧಿ ಕಾನೂನಾಗಿದೆ. ಇದು ಸ್ವೀಕಾರಹವಲ್ಲ. ವಕ್ಫ ಆಸ್ತಿಗಳ ಪ್ರಕಾರಗಳು, ಅವುಗಳ ಬಳಕೆ ಮತ್ತು ರಕ್ಷಣೆ ವಕ್ಫ ಕಾನೂನಿನಲ್ಲಿ ಇರುವ ಅಂಶಗಳನ್ನು ತಿಳಿಸಿದ ಅವರು ವಕ್ಫ ಕಲ್ಯಾಣ ವ್ಯವಸ್ಥೆಯನ್ನು ಹಾಳು ಮಾಡಲು ಕೇಂದ್ರ ಸರ್ಕಾರವು ವಕ್ಫ ತಿದ್ದುಪಡಿ ಮಸೂದೆ 2025 ಅನ್ನು ಜಾರಿಗೆ ತಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊಪ್ಪಳ | ವಿದ್ಯಾರ್ಥಿ ಅಂಕಪಟ್ಟಿ, ಟಿಸಿ ಕೊಡದ ವಾಸವಿ ಶಾಲೆ ಮುಖ್ಯಶಿಕ್ಷಕ ಫಕ್ಕೀರಪ್ಪ ಎಮ್ಮಿನವರ: ಪಾಲಕರ‌ ಪರದಾಟ

ಕಾರ್ಯಕರ್ತರು, ಜಮಾತೆ ಇಸ್ಲಾಮಿ ಮಾಜಿ ಮಹಿಳಾ ಆಧ್ಯಕ್ಷೆ ಸಾಲಿಹ ಬೇಗಮ್, ಜಮಾತೆ ಇಸ್ಲಾಮಿ ಮಾಜಿ ಅಧ್ಯಕ್ಷ ಅಬ್ದುಲ್ ಖುದ್ದೂಸ್, ಮೊಹಮ್ಮದ್ ರಫೀಕ್, ಜವ್ವಾದ ಸಿದ್ದಿಕಿ, ಹುಮ್ಯಾನಿಟರಿಯನ್ ರಿಲೀಫ್ ಸೊಸೈಟಿ ಅಧ್ಯಕ್ಷ ಆಸಿಫ ಅಲಿ, ಎಸ್‌ಐಒ ತಾಲೂಕು ಅಧ್ಯಕ್ಷ ಶಾಯಿದ್ ಆಫ್ರಿದಿ, ಎಸ್‌ವಾಯ್‌ಎಮ್ ತಾಲೂಕ ಅಧ್ಯಕ್ಷ ರಾಜ, ಜಿಐಒ ಕಾರ್ಯಕರ್ತರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X