ಕೊಪ್ಪಳ | ಬೆನ್ನಿಗೆ ಚೂರಿ ಇರಿಯುವ ಸರ್ಕಾರದ ನಡೆ ಖಂಡನೀಯ: ಎಐಡಿಎಸ್‌ಒ ಸಂಚಾಲಕ ಗಂಗರಾಜ್ ಅಳ್ಳಳ್ಳಿ

Date:

Advertisements

ರಾಜ್ಯ ಸರ್ಕಾರ ಸರ್ಕಾರಿ ಶಾಲೆ ಮುಚ್ಚುವ ‘ಹಬ್ ಆಂಡ್ ಸ್ಪೋಕ್’ ಜಾರಿಗೊಳಿಸಿ ಶಾಲೆ ಮುಚ್ಚುವ ಮೂಲಕ ಬೆನ್ನಿಗೆ ಚೂರಿ ಇರಿಯುವ ಸರ್ಕಾರದ ನಡೆ ಖಂಡನೀಯ ಎಂದು ಎಐಡಿಎಸ್‌ಒ ಕೊಪ್ಪಳ ಜಿಲ್ಲಾ ಸಂಚಾಲಕ ಗಂಗರಾಜ್ ಅಳ್ಳಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೊದಲ ಹಂತದಲ್ಲಿ 6000ಕ್ಕೂ ಅಧಿಕ ಸರ್ಕಾರಿ ಶಾಲೆ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಬಡ ವಿದ್ಯಾರ್ಥಿಗಳ ಹಾಗೂ ಜನ ವಿರೋಧಿ ನಿಲುವಿಗೆ ಎಐಡಿಎಸ್‌ಓ ಹಾಗೂ ರಾಜ್ಯದ ಜನತೆಯ ಪ್ರತಿರೋಧಕ್ಕೆ ಕಿವಿಗೊಡದೆ, ಮಾದರಿ ಶಾಲೆಗಳ ಹೆಸರಿನಲ್ಲಿ ರಾಜ್ಯದ ಸಾವಿರಾರು ಶಾಲೆಗಳನ್ನು ಮುಚ್ಚಲು ಹೊರಟಿರುವ ಈ ಬಜೆಟ್‌ ಖಂಡನೀಯ” ಎಂದರು.

“500 ಪಬ್ಲಿಕ್ ಶಾಲೆಗಳ ನಿರ್ಮಾಣ ಸ್ವಾಗತಾರ್ಹವಾಗಿದ್ದರೂ, ಈಗಾಗಲೇ ಇರುವ ಶಾಲೆಗಳನ್ನು ಮುಚ್ಚಲು ಇದು ಸಮಂಜಸವಲ್ಲ. ಬೆನ್ನಿಗೆ ಚೂರಿ ಇರಿಯುವ ಸರ್ಕಾರದ ನಡೆಯನ್ನು ರಾಜ್ಯದ ಎಐಡಿಎಸ್ಒ ತೀವ್ರವಾಗಿ ಖಂಡಿಸುತ್ತದೆ. ರಾಜ್ಯಾದ್ಯಂತ 59,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದು, ಕೇವಲ 5,267 ಹುದ್ದೆಗಳ ಭರ್ತಿಯ ಅವಶ್ಯಕತೆಗೆ ಸಮರ್ಪಕವಾಗಿಲ್ಲ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿಯೂ ಇರುವ ಉಪನ್ಯಾಸಕರ ಕೊರತೆಯನ್ನು ಈ ಬಜೆಟ್ ನೀಗಿಸಿಲ್ಲ. ಕರ್ನಾಟಕದ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಶಿಷ್ಯವೇತನ ಬಂದಿಲ್ಲ ಎಂಬ ವಿದ್ಯಾರ್ಥಿಗಳ ದೂರು ಸರ್ಕಾರದ ಕಿವಿ ತಲುಪಿದ್ದೂ, ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಸಮರ್ಪಕ ಹಣ ನೀಡದೇ ಇರುವುದು ತೀವ್ರ ವಿಷಾದನೀಯ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಜಿಲ್ಲಾಧಿಕಾರಿಗಳಿಗೆ ಮೋರಗಾನಹಳ್ಳಿ ಗ್ರಾಮಸ್ಥರ ಅಳಲು

“ರಾಜ್ಯಾದ್ಯಂತ ಜನ ಹೋರಾಟದ ಫಲಶೃತಿಯಾಗಿ ಕಡು ಶಿಕ್ಷಣ ವಿರೋಧಿ ಎನ್ಇಪಿ-2020ನ್ನು ಹಿಂಪಡೆದಿರುವ ರಾಜ್ಯ ಸರ್ಕಾರವು, ಶಾಲಾ ಹಂತದಲ್ಲೇ ಕೌಶಲ್ಯ ಶಿಕ್ಷಣವನ್ನು ಉತ್ತೇಜಿಸುವ ಎನ್‌ಇಪಿ ಮಾದರಿಯಲ್ಲೇ ‘ಸ್ಕಿಲ್ ಅಟ್ ಸ್ಕೂಲ್’ ಯೋಜನೆಯನ್ನು ಘೋಷಿಸಿದೆ. ಯುಜಿಸಿ ಮಾರ್ಗಸೂಚಿ-2025ನ್ನು ಬಹಿರಂಗವಾಗಿ ವಿರೋಧಿಸುವ ರಾಜ್ಯ ಸರ್ಕಾರವು ಅದರಲ್ಲಿರುವಂತೆಯೇ, ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಪ್ರೊಫೆಸರ್ ಆಫ್ ಪ್ರಾಕ್ಟಿಸ್’ ಜಾರಿಗೊಳಿಸಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ” ಎಂದು ಎಐಡಿಎಸ್ಒ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X