ಗಂಗಾವತಿ | ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಮುಂದುವರಿಸಲು ಆಗ್ರಹಿಸಿ ಕೆವಿಎಸ್ ಪ್ರತಿಭಟನೆ

Date:

Advertisements

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ. ಇದು ಖಂಡನೀಯ. ಮೊದಲು ನೀಡುತ್ತಿದ್ದ ನಿಯಮವನ್ನೇ ಸರಕಾರ ಮುಂದುವರೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಅಂಬೇಡ್ಕರ್ ಸರ್ಕಲ್‌ನಿಂದ ಬಸವೇಶ್ವರ ಸರ್ಕಲ್‌ನವರೆಗೆ ವಿದ್ಯಾರ್ಥಿಗಳು ಸರಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮುಖಂಡ ದುರುಗೇಶ್ ಬರಗೂರು, “ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಪ್ರೋತ್ಸಾಹ ಧನದ ಹಣವನ್ನು ಕಾಂಗ್ರೆಸ್ ಸರಕಾರವು ಬೇರೆ ಬೇರೆ ಯೋಜನೆಗೆ ಬಳಕೆ ಮಾಡಿದೆ. ಆ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ” ಎಂದು ಆರೋಪಿಸಿದರು.

Advertisements

ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಬಾರಿಗೆ ಶೇ.60-ಶೇ.74.9ರಷ್ಟು ಅಂಕ ಗಳಿಸಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಒಂದು ಬಾರಿ ಪ್ರೋತ್ಸಾಹ ಧನ ರೂ.7000, ಶೇ.75ರಷ್ಟು ಪಡೆದರೆ ರೂ. 15000 ಪ್ರೋತ್ಸಾಹ ಧನ ಕೊಡುತ್ತಿದ್ದರು. ಈಗ ಅದನ್ನು ಬದಲಾಯಿಸಿ ಶೇ.60-ಶೇ.74.9 ಅಂಕಗಳಿಗೆ ಕೊಡುವುದನ್ನು ಕೈಬಿಡಲಾಗಿದೆ. ಕೇವಲ ಶೇ.75ರಷ್ಟು ಅಂಕವನ್ನು ಮಾತ್ರ ಉಳಿಸಿಕೊಂಡಿದ್ದಾರೆ. ಈ ಹಿಂದೆ ಆದಾಯ ಮಿತಿ ಇರಲಿಲ್ಲ. ಈಗ, ವಾರ್ಷಿಕ 6 ಲಕ್ಷ ಆದಾಯ ಮಿತಿ ನಿಗದಿಪಡಿಸಿದ್ದಾರೆ. ಹಾಗೆಯೇ ಪಿಯುಸಿ, ಪದವಿಯಲ್ಲಿ ಶೇ.75ರಷ್ಟು ಅಂಕ ಗಳಿಸಿದವರಿಗೂ ಸಹ 6 ಲಕ್ಷ ಆದಾಯ ಮಿತಿ ನಿಗದಿಪಡಿಸಿ ಆದೇಶ ಹೊರಸಿದೆ. ಸರಕಾರ ವಿದ್ಯಾರ್ಥಿ ವಿರೋಧಿ ನೀತಿ ಯೋಜನೆಯನ್ನು ಜಾರಿಗೊಳಿಸಿದರೆ, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳ ಜೀವನಕ್ಕೆ ಉನ್ನತ ವ್ಯಾಸಂಗಕ್ಕೆ ಅಪಾಯವೂ ಇದೆ ಎಂದರು.

ಇದನ್ನು ಓದಿದ್ದೀರಾ? ತುಮಕೂರು | ಗೃಹ ಸಚಿವರ ಸ್ವಕ್ಷೇತ್ರದಲ್ಲೇ ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಪರದಾಟ!

ಸರಕಾರ ಇದನ್ನು ಎಚ್ಚೆತ್ತುಕೊಂಡು ಈ ನೀತಿಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಮರಿಸ್ವಾಮಿ , ಶರಣು ಹಾಗೂ ಕಾಲೇಜು ವಿದ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X