ಕೊಪ್ಪಳ | ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಾದ ಹೀರಾಬಾಯಿ ನಾಗರಾಜ್ ಸಿಂಗ್ ಅವರು ಅಧ್ಯಕ್ಷರಾಗಿ ಹಾಗೂ ಸುಧಾ ಸೋಮನಾಥ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಎಲ್ಲಾ 28 ಸದಸ್ಯರೂ ಒಗ್ಗಟ್ಟಾಗಿ ಬೆಂಬಲ ನೀಡಿದ್ದರಿಂದ ಹೀರಾಬಾಯಿ ಮತ್ತು ಸುಧಾ ಇಬ್ಬರೂ ಏಕಮತದಿಂದ ಆಯ್ಕೆಯಾದರು. ಈ ಮೂಲಕ ನಗರಸಭೆಯ ಆಡಳಿತವನ್ನು ಮತ್ತೊಮ್ಮೆ ಬಿಜೆಪಿ ತನ್ನ ವಶಕ್ಕೆ ತೆಗೆದುಕೊಂಡಿದೆ.

ಫಲಿತಾಂಶ ಕುರಿತು ಶಾಸಕ ಗಾಲಿ ಜನಾರ್ಧನ ರೆಡ್ಡಿ ಮಾತನಾಡಿ, “ಈ ಚುನಾವಣೆಯ ಫಲಿತಾಂಶವು ಬಿಜೆಪಿಯ ಸಂಘಟಿತ ಶಕ್ತಿ ಮತ್ತು ನಗರದ ಜನತೆಯ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಅಧ್ಯಕ್ಷರಾದ ಹೀರಾಬಾಯಿ ನಾಗರಾಜ್ ಸಿಂಗ್ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಸುಧಾ ಸೋಮನಾಥ್ ಅವರ ನೇತೃತ್ವದಲ್ಲಿ ಗಂಗಾವತಿ ನಗರವು ಸರ್ವತೋಮುಖವಾಗಿ ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಯಲಿ, ಜನಸೇವೆ, ಪಾರದರ್ಶಕ ಆಡಳಿತ ಹಾಗೂ ನಗರದ ಸಮಗ್ರ ಬೆಳವಣಿಗೆಗೆ ಇಬ್ಬರೂ ಶ್ರಮಿಸಲಿ” ಎಂದು ಹಾರೈಸಿದರು.

Advertisements
WhatsApp Image 2025 05 03 at 10.37.27 AM 1

ಈ ವೇಳೆ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಬಸವರಾಜ್ ದಡೇಸುಗೂರು, ವಿರುಪಾಕ್ಷಪ್ಪ ಸಿಂಗನಾಳ್, ಗೆರೇಗೌಡ್ರು, ತಿಪ್ಪೇರುದ್ರಸ್ವಾಮಿ, ಕಾಶಿನಾಥ್ ಚಿತ್ರಗಾರ, ರಮೇಶ್ ಚೌಡ್ಕಿ, ಪಂಪಾಪತಿ ಸಿಂಗನಾಳ್, ಡಿ.ಕೆ ಆಗೋಲಿ, ಮನೋಹರಗೌಡ ಹೇರೂರು, ಯಮನೂರು ಚೌಡ್ಕಿ, ಚನ್ನವೀರನ ಗೌಡ್ರು, ಚಂದ್ರು ಹೀರೂರು, ವೆಂಕಟೇಶ್ ಜಬ್ಬಲಗುಡ್ಡ, ನಾಗರಾಜ್ ಚಳಗೇರಿ, ರಮೇಶ್ ಹೊಸಮಲಿ, ಅರ್ಜುನ್ ನಾಯಕ್, ದುರ್ಗಪ್ಪ ದಳಪತಿ, ಗಂಗಾಧರ ಸ್ವಾಮಿ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೊಪ್ಪಳ | ತರಕಾರಿ ಬೆಲೆ ಕುಸಿತ; ರೈತರಿಗೆ ಆರ್ಥಿಕ ಹೊಡೆತ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X