ಕೊಪ್ಪಳ | ಮರ ಕಡಿತ ಕಾರ್ಯಕ್ಕೆ ವಿರೋಧ; ನೆಲದಡಿ ವಿದ್ಯುತ್ ತಂತಿ ಅಳವಡಿಕೆಗೆ ಆಗ್ರಹ

Date:

Advertisements

ಕೆಲವೇ ದಿನಗಳಲ್ಲಿ ಮುಂಗಾರು ಮಳೆ, ಗಾಳಿ, ಗುಡುಗು ಹಾಗೂ ಸಿಡಿಲು ಆರಂಭವಾಗಲಿರುವ ಹಿನ್ನೆಲೆ, ವಿದ್ಯುತ್ ಇಲಾಖೆ ರಸ್ತೆಯ ಅಕ್ಕಪಕ್ಕ ಇರುವ ವಿದ್ಯುತ್ ತಂತಿಗಳಿಗೆ ತಾಗುವ ಮರಗಳನ್ನು ಕಡಿಯಲಿದ್ದಾರೆ. ಆದರೆ ಈ ಕ್ರಮ ಪರಿಸರ ಹಾನಿಗೆ ಕಾರಣವಾಗುತ್ತಿದೆ. ಹಾಗಾಗಿ ಮರಗಳನ್ನು ಉಳಿಸಿ, ವಿದ್ಯುತ್ ತಂತಿಗಳನ್ನು ನೆಲದಡಿ ಅಳವಡಿಸುವಂತೆ ಜನಪರ ಸಂಘಟನೆಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಎಸ್‌ ಎ ಗಫಾರ್ ಆಗ್ರಹಿಸಿದ್ದಾರೆ.

ನಗರದ ಎಲ್ಲಾ ರಸ್ತೆಗಳ ಎರಡೂ ಬದಿಗಳಲ್ಲಿರುವ ವಿದ್ಯುತ್ ಕಂಬಗಳ ತಂತಿಗಳನ್ನು ಭೂಮಿಯಡಿಯಲ್ಲಿ ಅಳವಡಿಸುವ ಯೋಜನೆ ಜಾರಿಗೆ ತರುವುದಲ್ಲದೆ, ನಗರದ ಎಲ್ಲಾ ರಸ್ತೆಗಳ ಎರಡೂ ಬದಿಗಳಲ್ಲಿ ಸಸಿ ನೆಡುವ ಮೂಲಕ ನಗರ ಹಸಿರೀಕರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಯೂ ಕಾಂಗ್ರೆಸ್ ಪಕ್ಷದವರಿದ್ದಾರೆ. ಈ ಯೋಜನೆ ರೂಪಿಸಿ ಜಾರಿಗೆ ತರಲು ಯಾವ ಅಡೆತಡೆಗಳೂ ಇಲ್ಲ. ನಿರ್ಲಕ್ಷ್ಯಕ್ಕೆ ಕಾರಣ ಏನು ತಿಳಿಯುತ್ತಿಲ್ಲ.‌ ಜನಪ್ರತಿನಿಧಿಗಳು ಒಂದೇ ಪಕ್ಷದವರೂ ಇದ್ದರೂ ಇಂತಹ ಅವಧಿಯಲ್ಲಿ ಅನೇಕ ಬೃಹತ್ ಯೋಜನೆಗಳನ್ನು ತರದೆ ಇದ್ದರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾದೀತು ಎಂದರು.

Advertisements

ಇದನ್ನೂ ಓದಿ: ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಇಬ್ಬರ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X