ಕೊಪ್ಪಳ | ಕಳಪೆ ಪಡಿತರ ವಿತರಣೆ; ಬಿಸಿಯೂಟದ‌ ಅಕ್ಕಿ, ಗೋದಿ, ಬೇಳೆ ಚೀಲಗಳಲ್ಲಿ ಜಡೆಗಟ್ಟಿದ ಹುಳುಗಳು

Date:

Advertisements

ಕೊಪ್ಪಳ ಜಿಲ್ಲೆಯ ಕನಕಗಿರಿಯ ಶಾಸಕರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಪದಾರ್ಥವಾಗಿ ಕಳಪೆ ಪಡಿತರ ವಿತರಣೆ ಮಾಡಿದ್ದು, ಬೇಳೆ, ಗೋದಿ ಅಕ್ಕಿಯಂತಹ ಪದಾರ್ಥಗಳು ಜಡೆಗಟ್ಟಿವೆ. ಕಳೆದ ಎರಡರಿಂದ ಮೂರು ತಿಂಗಳ ಹಿಂದೆ ಪೂರೈಸಿರುವ ಆಹಾರ ಸಾಮಗ್ರಿಗಳಲ್ಲಿ ಹುಳುಗಳು ಪಿತಗುಡುತ್ತಿವೆ.

ಕಳಪೆ ಪದಾರ್ಥಗಳಿಂದಲೇ ಆಹಾರ ತಯಾರಿಸಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದಾರೆ. ಈ ಕುರಿತು ಮುಖ್ಯೋಪಾಧ್ಯಾಯ ಸಂಗಮೇಶ್ ಹಿರೇಮಠ್‌ ಅವರನ್ನು ಕೇಳಿದರೆ ‘ಬಿಸಿಯೂಟದ ಅಧಿಕಾರಿಗಳು ಇವನ್ನೇ ಕಳುಸಿದ್ದಾರೆ. ನಾವೂ ಇದನ್ನೇ ಬೇಯಿಸಿ ಊಟಕ್ಕೆ ಬಡಿಸುತ್ತೇವೆʼ ಎಂದು ಬೇಜವಾಬ್ದಾರಿ ಮಾತು ಹೇಳಿದ್ದಾರೆ.

ಬಿಸಿಯೂಟದ ಅಧಿಕಾರಿಗಳು ಸಂಪರ್ಕಕ್ಕೆ ಹೋದರೆ ‘ಕೊಪ್ಪಳ ಜಿಲ್ಲಾಧಿಕಾರಿ ಆಫೀಸ್‌ನಲ್ಲಿ ಮೀಟಿಂಗ್ ಇರುತ್ತದೆ ನಮಗೆ ಬರಲು ಆಗುವುದಿಲ್ಲ. ಬೇರೆ ಅಧಿಕಾರಿಗಳನ್ನು ಕಳುಹಿಸಿಕೊಡುತ್ತೇವೆʼ ಎಂದು ಹೇಳುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ: ಡಿಸಿ ಶಿಲ್ಪಾ ನಾಗ್

“ತಾಲೂಕಿನ ಎಲ್ಲ ಶಾಲೆಗಳಲ್ಲಿ ಇದೇ ರೀತಿ ಕಳಪೆ ಆಹಾರ ಪೂರೈಕೆಯಾಗುತ್ತಿದ್ದು, ಇದನ್ನು ಅರಿತು ಮೇಲಧಿಕಾರಿಗಳು ಮುಖ್ಯ ಉಪಾಧ್ಯಾಯರು ಮತ್ತು ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪಾಮಣ್ಣ ಅರಳಿಗನೂರ ಒತ್ತಾಯಿಸಿದರು.

ಮುಖ್ಯೋಪದ್ಯಾಯ

ಪಟ್ಟಣ ಪಂಚಾಯತ್ ಸದಸ್ಯ ಶೇಷಪ್ಪ ಪೂಜಾರ್, ಎಸ್‌ಡಿಎಂಸಿ ಸದಸ್ಯರಾದ ವೆಂಕಟೇಶ್ ನೀರ್ಲೂಟಿ ಹನುಮಂತ್ ರೆಡ್ಡಿ, ಭೀಮೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X