ಕೊಪ್ಪಳ | ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳ ವಿದ್ಯುತ್‌ ಕಡಿತ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಅಕ್ರಮವಾಗಿ ಪಡೆಯಲಾಗಿದ್ದ ವಿದ್ಯುತ್ ಸಂಪರ್ಕವನ್ನು ಮಂಗಳವಾರ ಕಡಿತ ಮಾಡಲಾಗಿದ್ದು, ಹೋಟೆಲ್‌ಗಳಿಗೂ ಇದರ ಬಿಸಿ ತಟ್ಟಿದೆ.

ಇತ್ತೀಚೆಗೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಯುವಕನ ಕೊಲೆ ನಡೆದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ಅಧಿಕಾರಿಗಳು ಸರಣಿ ಸಭೆ ನಡೆಸಿದ್ದು, ಅಕ್ರಮ ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಕಡಿವಾಣ ಹಾಕಲು ತಂಡಗಳನ್ನು ರಚಿಸಿದೆ. ಅಕ್ರಮವಾಗಿ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳನ್ನು ನಡೆಸುತ್ತಿದ್ದವರಿಗೆ ಚಾಟಿ ಬೀಸಿದ್ದಾರೆ.

ತಹಶೀಲ್ದಾ‌ರ್, ಅರಣ್ಯ, ಪ್ರವಾಸೋದ್ಯಮ, ಅಬಕಾರಿ, ಪೊಲೀಸ್ ಮತ್ತು ಜೆಸ್ಕಾಂ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡ ಆನೆಗೊಂದಿ, ಸಾಣಾಪುರ ಭಾಗದಲ್ಲಿ ಕಾರ್ಯಾಚರಣೆ ನಡೆಸಿತು. ಸಾಣಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಭೂಮಿಯಲ್ಲಿ ಗುಡಿಸಲು ಕೊಠಡಿಗಳು ನಿರ್ಮಿಸಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದವರು ಸಮಯವಕಾಶ ನೀಡುವಂತೆ ಕೋರಿದರೆ, ಇನ್ನೂ ಕೆಲವರು ತಮ್ಮ ರೆಸಾರ್ಟ್ ಕುರಿತು ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ದಾಖಲೆ ತೋರಿಸಿದರು.

Advertisements

“ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳನ್ನು ತೆರವು ಮಾಡುವಂತೆ ಹಿಂದೆ ನೋಟಿಸ್ ನೀಡಿದ್ದರೂ ಯಾರೂ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದ್ದರಿಂದ ಈಗ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ’ ಎಂದು ಗಂಗಾವತಿ ತಹಶೀಲ್ದಾ‌ರ್ ಯು ನಾಗರಾಜ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲ್ವೆ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಪತ್ತೆ; ಕೊಲೆ ಶಂಕೆ

“ಹಿಂದೆ ಇದೇ ರೀತಿಯ ಕಾರ್ಯಾಚರಣೆ ನಡೆಸಿದ ಕೆಲವೇ ದಿನಗಳಲ್ಲಿ ರೆಸಾರ್ಟ್‌ಗಳು ಹಾಗೂ ಹೋಂಸ್ಟೇಗಳ ಮಾಲೀಕರು ಅಧಿಕಾರಿಗಳ ಗಮನಕ್ಕೆ ತಾರದೇ ಮರಳಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಈಗಲೂ ಅದೇ ರೀತಿ ಮಾಡಿದರೆ ಪ್ರಕರಣ ದಾಖಲಿಸಲಾಗುವುದು” ಎಂದು ಪೊಲೀಸರು ಎಚ್ಚರಿಕೆ ನೀಡಿದರು.unauthorized resorts

ಈ ನಡುವೆ, “ಜಿಲ್ಲಾಡಳಿತದ ಈ ಕಟ್ಟುನಿಟ್ಟಿನ ಕ್ರಮ ಎಷ್ಟು ದಿವಸ ಜಾರಿಯಲ್ಲಿರುತ್ತದೆ ಎಂಬುದನ್ನು ಕಾದು ನೋಡಬೇಕು” ಎನ್ನುವ ಸ್ಥಳೀಯರ ಗುಸುಗಸು ಮಾತುಗಳೂ ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X