ಕೊಪ್ಪಳ | ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯ ಹೆಚ್ಚಿಸುವಂತೆ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

Date:

Advertisements

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಸ್ವಾಮಿ ಕೆ ಎಂ ಮತ್ತು ಗಂಗಾವತಿ ಶಾಸಕ ಜಿ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ನೇತೃತ್ವದಲ್ಲಿ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿತು.

ಕೊಪ್ಪಳದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರ್‌ಒಬಿ ಉದ್ಘಾಟನೆ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿ, “10-15 ವರ್ಷಗಳಿಂದ ನೀಡಿದ ಅರ್ಜಿಗಳು ಫಲಿತಾಂಶಗಳನ್ನು ನೀಡಿಲ್ಲ. ಒಂದು ತಿಂಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ಬಳ್ಳಾರಿಯಿಂದ ಹುಬ್ಬಳ್ಳಿವರೆಗೆ ಪಾದಯಾತ್ರೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ-ಮಂಗಳೂರು ಮತ್ತು ಶಿವಮೊಗ್ಗ-ಬಳ್ಳಾರಿ-ಚೆನ್ನೈ ರೈಲು ಸೇವೆಗಳನ್ನು ಪುನರಾರಂಭಿಸುವುದು, ಕೊಪ್ಪಳ-ಬಳ್ಳಾರಿ-ಗುಂತಕಲ್ ಮಾರ್ಗದಲ್ಲಿ ಇಂಟರ್‌ಸಿಟಿ ಅಥವಾ ವಂದೇ ಭಾರತ್ ಸೇವೆಯನ್ನು ಪರಿಚಯಿಸುವುದು, ಕೊಪ್ಪಳ, ಹೊಸಪೇಟೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ವಿಜಯಪುರ-ಮಂಗಳೂರು ಸೇವೆಯನ್ನು ಗದಗ-ಬಳ್ಳಾರಿ-ಚಿತ್ರದುರ್ಗ-ಚಿಕ್ಕಜಾಜೂರು ಲಿಂಕ್ ಎಕ್ಸ್‌ಪ್ರೆಸ್‌ಗೆ ಮಾರ್ಪಡಿಸಬೇಕು” ಎಂದು ಸಮಿತಿಯ ಕಾರ್ಯಕರ್ತರು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮತ್ತೆ ಮಂಗನ ಕಾಯಿಲೆ ಆತಂಕ; ಹೈ-ಅಲರ್ಟ್‌ ಘೋಷಣೆ

“ಮುಂಬೈ-ಹೊಸಪೇಟೆ ರೈಲು ಸೇವೆಯನ್ನು ಬಳ್ಳಾರಿವರೆಗೆ ವಿಸ್ತರಿಸಬೇಕು. ನಂತರದ ದಿನಗಳಲ್ಲಿ ಬೆಂಗಳೂರು ಅಥವಾ ಮೈಸೂರು ರೈಲು ನಿಲ್ದಾಣಗಳ ವರೆಗೆ ವಿಸ್ತರಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X