ಕೊಪ್ಪಳ | ಜ.31ರಂದು ‘ರಾವುತ್’ ಚಲನಚಿತ್ರ ಬಿಡುಗಡೆ

Date:

Advertisements

ಕೊಪ್ಪಳ ಜಿಲ್ಲೆಯ ಕನಕಗಿರಿ, ಜಬ್ಬಲಗುಡ್ಡ, ಮುಕ್ಕುಂಪಿ ಸೇರಿದಂತೆ ವಿವಿಧೆಡೆ ಚಿತ್ರೀಕರಣಗೊಂಡ ಕನ್ನಡದ ʼರಾವುತ್‌ʼ ಸಿನಿಮಾ ಇದೇ ಜನವರಿ 31ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಸಿದ್ದು ವಜ್ರಪ್ಪ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಚಿತ್ರದ ಪೊಸ್ಟರ್ ಬಿಡುಗಡೆ, ಟ್ರೈಲರ್ ಲಾಂಚ್‌ಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿ, “ರಾವುತ್‌ ಸಿನಿಮಾ ಸಂಪೂರ್ಣವಾಗಿ ಉತ್ತರ ಕರ್ನಾಟಕ ಭಾಷೆ, ಸೊಗಡು, ಲೊಕೇಷನ್ ಇರುವ ಚಿತ್ರವಾಗಿದ್ದು, ಈಗಾಗಲೇ ಚಿತ್ರದ ಸೆನ್ಸಾರ್ ಮುಗಿದಿದೆ. ಯು/ಎ ಪ್ರಮಾಣತ್ರದೊಂದಿಗೆ ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್ ಸೇರಿದಂತೆ 130 ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ” ಎಂದರು.

“ಸತ್ತ ನಂತರ ಆತ್ಮದ ಪಯಣವನ್ನು ತೋರಿಸುವ ಸಿನಿಮಾ ಇದಾಗಿದ್ದು, ಈ ರೀತಿಯ ಪ್ರಯತ್ನವಿರುವ ಸಿನಿಮಾ ಈವರೆಗೆ ಬಂದಿಲ್ಲ.‌ ಎಲ್ಲರಿಗೂ ಭೂಮಿಗೆ ಬರುವ ಎಂಟ್ರಿ ಗೊತ್ತು; ಆಮೇಲೆ ಭೂಮಿಯಿಂದ ಎಕ್ಸಿಟ್ ಯಾರಿಗೂ ಗೊತ್ತಿಲ್ಲ. ಕೆಲ ಸೈದ್ಧಾಂತಿಕ ಅಂಶಗಳೊಂದಿಗೆ ಸಿನಿಮಾ ನಿರ್ಮಿಸಲಾಗಿದೆ. ವೇದೋಪನಿಷತ್ತು ಸೇರಿ ಹಲವು ಪುಸ್ತಕಗಳನ್ನು ಅಧ್ಯಯನ ಮಾಡಿ, ಈ ಕುರಿತ ತಜ್ಞರ ಹಿರಿಯರ ಮಾರ್ಗದರ್ಶನದಲ್ಲಿ ಸಿನಿಮಾ ಮಾಡಿದ್ದೇವೆ” ಎಂದು ನಿರ್ದೇಶಕರು ಹೇಳಿದರು.‌

Advertisements
ರಾವುತ್ 1

ಶಿಕ್ಷಕರ ಸೇವಾ ಬಳಗದ ಮುಖಂಡ ಬೀರಪ್ಪ ಅಂಡಗಿ ಮಾತನಾಡಿ, “ರಾವುತ್ ಸಿನಿಮಾದ ಪ್ರೀಮಿಯರ್ ಷೋ ನೋಡಿದ್ದೇವೆ. ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದೆ. ಸಿನಿಮಾದ ವಿಶೇಷವೆಂದರೆ ಕೊಪ್ಪಳ ಭಾಗದ ಕಲಾವಿದರು ಸೇರಿದಂತೆ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ. ಈ ಹೊಸ ಚಿತ್ರ ಎಲ್ಲೂ ಹೊಸಬರ ಸಿನಿಮಾ ಎನಿಸದೇ, ನುರಿತ ತಂತ್ರಜ್ಞರ ಕೆಲಸದಿಂದ ಮಾಡಿದ ಕಮರ್ಷಿಯಲ್ ಸಿನಿಮಾ ಫೀಲ್ ಕಟ್ಟಿಕೊಡುತ್ತದೆ. ಚಿತ್ರದ ಮೂರು ಹಾಡುಗಳಿಗೆ ಜಿಲ್ಲೆಯ ಶಿಕ್ಷಕ ಸುರೇಶ ಕಂಬಳಿ ಹಾಡು ರಚಿಸಿದ್ದಾರೆ. ಅದ್ಭುತ ಸಾಹಿತ್ಯ ಹೊಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪೆ.10ರಿಂದ 12ರವರೆಗೆ ಕುಂಭಮೇಳ; ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಎಚ್ ಸಿ ಮಹದೇವಪ್ಪ ಸೂಚನೆ

ನಿರ್ಮಾಪಕ ಈರಣ್ಣ ಬಡಿಗೇರ ಮಾತನಾಡಿ, “ಸುಮಾರು ₹85 ಲಕ್ಷ ವೆಚ್ಚದಲ್ಲಿ ಸಿನಿಮಾ ನಿರ್ಮಿಸಲಾಗಿದ್ದು, ಪೊಸ್ಟ್ ಪ್ರೊಡಕ್ಷನ್, ಪ್ರಮೋಷನ್ ಕಾರ್ಯಗಳು ನಡೆಯುತ್ತಿವೆ. ‘ರಾವುತ್’ ಎಂದರೆ ಕುದುರೆ ಪಳಗಿಸುವವನು ಎಂದರ್ಥ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆಯೆಂದು ನಂಬಿಕೆ ಇದೆ” ಎಂದು ಹೇಳಿದರು.

ಈ ವೇಳೆ ಚಿತ್ರತಂಡದ ನಿಂಗಪ್ಪ ಕಂಬಳಿ, ಸುರೇಶ ಕಂಬಳಿ ಸೇರಿದಂತೆ ಚಿತ್ರತಂಡದ ಅನೇಕರು ಇದ್ಧರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X