ಕೊಪ್ಪಳ | ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Date:

Advertisements

ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅಮಿತ್ ಶಾ ದ್ವೇಷ ಭಾಷಣ ಮಾಡಿದ ಬಗ್ಗೆ ದೇಶದ ಮುಂದೆ ಕ್ಷಮೆ ಕೇಳಬೇಕು. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಹೊರಹಾಕು ಎಂದು ಒತ್ತಾಯಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಪಾರ್ಲಿಮೆಂಟ್‌ನಲ್ಲಿ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಹೇಳಿಕೆ ಕೊಟ್ಟಿರುವುದು ಹಾಗೂ ಕರ್ನಾಟಕದ ಚಳಿಗಾಲ ಅಧಿವೇಶನ ಸುವರ್ಣ ಸೌಧದಲ್ಲಿ, ಮಾಜಿ ಶಾಸಕ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ತುಚ್ಛವಾಗಿ ಮಾತನಾಡಿರುವುದು ಖಂಡನೀಯ. ಪದೇಪದೇ ಅಸಾಂವಿಧಾನಿಕ ಹೇಳಿಕೆಯನ್ನು ಬಿಜೆಪಿಯ ನಾಯಕರು ಕೊಡುತ್ತಿದ್ದಾರೆ. ಇದಕ್ಕೆ ಕಡಿವಾಣ ಬೀಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿ‌ಪಿ‌ಐ ಕೊಪ್ಪಳ ಜಿಲ್ಲಾಧ್ಯಕ್ಷ ಸಲೀಮ್ ಖಾದ್ರಿ, ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಂತಹ ಸಂವಿಧಾನದ ಅಡಿಯಲ್ಲಿ ಈ ದೇಶದ ಗೃಹ ಸಚಿವರಾಗಿದ್ದಾರೆ ಎಂಬುದನ್ನು ಮರೆಯಬಾರದು. ಆರ್‌ ಎಸ್ ಎಸ್ ಮತ್ತು ಸಂಘ ಪರಿವಾರದ ಮನುಸ್ಮೃತಿ ಪಾಲನೆ ಮಾಡುವವರಾಗಿರುವುದರಿಂದ ನಮ್ಮ ದೇಶದ ಸಂವಿಧಾನಕ್ಕೆ ಗೌರವ ಕೊಡುತ್ತಿಲ್ಲ. ಹೋರಾಟದ ಮೂಲಕವೇ ಮುಂದೊಂದು ದಿನ ಎಸ್‌ಡಿ‌ಪಿ‌ಐ ಇಂತಹವರಿಗೆ ತಕ್ಕ ಪಾಠ ಕಲಿಸುತ್ತದೆ ಎಂದರು.

Advertisements
SDPI2

ಡಿಎಸ್ಎಸ್ ತಾಲೂಕು ಘಟಕದ ಅಧ್ಯಕ್ಷರಾದ ರಾಘು ಚಾಕ್ರಿ ಮಾತನಾಡಿ, “ಅಮಿತ್ ಶಾ ಗ್ರಹ ಮಂತ್ರಿ ಸ್ಥಾನಕ್ಕೇ ಲಾಯಕ್ಕಿಲ್ಲ. ಒಬ್ಬ ನಾಲಾಯಕ್ ಕೇಂದ್ರ ಸಚಿವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವುದಕ್ಕೂ ಯೋಗ್ಯತೆ ಇಲ್ಲ. ಅಂಬೇಡ್ಕರ್ ಜಗತ್ತಿನ ಒಬ್ಬ ಚಿಂತಕ ಮಾನವತಾವಾದಿ, ಸಾಮಾಜಿಕ ಹೋರಾಟಗಾರ. ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿ, ತಮ್ಮ ನೈಜ ಸಂಸ್ಕೃತಿ ತೋರಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಭಾರತೀಯ ಭೀಮ್ ಸೇನೆ ಜಿಲ್ಲಾಧ್ಯಕ್ಷ ಕಾಶಪ್ಪ ಛಲವಾದಿ ಮಾತನಾಡಿ, ಬಿಜೆಪಿಯ ನಾಯಕರು ದೇಶದಲ್ಲಿ ಮತ್ತು ರಾಜ್ಯದಲ್ಲಿ ಪದೇ ಪದೇ ಅಶಾಂತಿ ಉಂಟು ಮಾಡುತ್ತಿದ್ದಾರೆ. ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯ ಕುತಂತ್ರವನ್ನು ದಲಿತರು, ಅಲ್ಪಸಂಖ್ಯಾತರು ಅರ್ಥ ಮಾಡಿಕೊಳ್ಳದಿದ್ದರೆ, ಬರುವ ದಿನಗಳಲ್ಲಿ ಇವರಿಂದ ಬಾಬಾ ಸಾಹೇಬ್ ರಚಿಸಿದ ಕಾನೂ‌ನು ಬದಲಾಯಿಸಿ ಮನುಸ್ಮೃತಿ ಕಾನೂನು ಜಾರಿಗೆ ತರುತ್ತಾರೆ. ಆದ್ದರಿಂದ, ಶೋಷಿತರು ಎಚ್ಚೆತ್ತುಕೊಳ್ಳಬೇಕು. ಮುಂದಿನ ದಿನದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆಕೊಟ್ಟರು.

ಇದನ್ನು ಓದಿದ್ದೀರಾ? ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

ಪ್ರತಿಭಟನೆಯಲ್ಲಿ ಎಸ್‌ಡಿ‌ಪಿ‌ಐ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಸಾದಿಕ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಜಾಮುದ್ದಿನ್ ಮಾಳೆಕೊಪ್ಪ, ಉಪಾಧ್ಯಕ್ಷ ಫಾರೂಕ್ ಅತ್ತಾರ, ಎಸ್‌ಡಿ‌ಪಿ‌ಐ ಜಂಟಿ ಕಾರ್ಯದರ್ಶಿ ಅರ್ಷದ್ ಶೈಖ್, ದಲಿತ ಯುವ ಮುಖಂಡ ಪ್ರಕಾಶ್ ಬೆಲ್ಲದ ಮುಂತಾದವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X