ಕೊಪ್ಪಳ | ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಎಸ್‌ಎಫ್‌ಐ ಆಗ್ರಹ

Date:

Advertisements

ಕೊಪ್ಪಳದ ಕುಷ್ಟಗಿ ತಾಲೂಕಿನ ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ, “ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಶಿಕ್ಷಣಕ್ಕಾಗಿ ಬರುತ್ತಾರೆ. ಆದರೆ ಅವರಿಗೆ ಸಮರ್ಪಕ ಬಸ್ ವ್ಯವಸ್ಥೆಯಿಲ್ಲದೇ ದಿನನಿತ್ಯ ಪರದಾಡುವ ಸ್ಥಿತಿ ಇದೆ. ಸಮಯಕ್ಕೆ ಸರಿಯಾಗಿ ಬಸ್ ಇಲ್ಲದೇ ಶಾಲಾ ಕಾಲೇಜುಗಳಿಗೆ ತಡವಾಗಿ ಹೋಗುವುದರಿಂದ ಶಾಲಾ ಕಾಲೇಜುಗಳಲ್ಲಿ ಹಾಜರಾತಿ ಕೊರತೆಯಿಂದ ಶಿಕ್ಷಣ ಕುಂಠಿತವಾಗಿದೆ. ಎಷ್ಟೋ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸುವ ಸಂದರ್ಭ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಗ್ರಾಮಕ್ಕೆ ಅಗತ್ಯ ಇರುವಷ್ಟು ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದರು.

ಹೋರಾಟದ ಸ್ಥಳಕ್ಕೆ ಡಿಪೋ ವಿಸ್ತರಣಾಧಿಕಾರಿಗಳು ಮತ್ತು ಎಎಸ್ಐ ಭೇಟಿ ನೀಡಿ ಕನಕೊಪ್ಪಕ್ಕೆ ಬಸ್ ಬಿಡುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Advertisements

ಇದನ್ನೂ ಓದಿ: ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು

ರಾಜ್ಯ ಸಹ ಕಾರ್ಯದರ್ಶಿ ಚಂದ್ರು ರಾಠೋಡ, ಮುಖಂಡರಾದ ಅನಿಲ್, ಶರಣು, ಬಸವರಾಜ್, ಉಮೇಶ, ಮಾರ್ಕಂಡಯ್ಯ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X