ಕೊಪ್ಪಳ | ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ; ಗುತ್ತಿಗೆದಾರ ವಿಶ್ವನಾಥ ಕುಂಬಾರನ ವಿರುದ್ಧ ಸೂಕ್ತ ಕ್ರಮವಾಗುವುದೇ?

Date:

Advertisements

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗಿರಿ ಗ್ರಾಮದ ಸಿಗ್ನೇಕೊಪ್ಪ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಹಿಂಬದಿಯಲ್ಲಿರುವ ಕೆಂಪು ಕೆರೆ ಮಣ್ಣು ಕಳ್ಳತನವಾಗಿದ್ದು, ಗರಚು ಮಣ್ಣನ್ನು ರಾತ್ರೋರಾತ್ರಿ ಕಳವು ಮಾಡಿ ಸರಿಸುಮಾರು 200ಕ್ಕೂ ಅಧಿಕ ಟ್ರ್ಯಾಕ್ಟರ್ ಗಾಡಿಗಳಷ್ಟು ಮಣ್ಣನ್ನು ಸಾಗಾಟ ಮಾಡಿದ್ದಾರೆ ಎಂದು ಗ್ರಾಮಸ್ಥರೆಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೆರೆಯ ಮಣ್ಣನ್ನು ರಿಯಲ್ ಎಸ್ಟೇಟ್ ದಧೆಕೋರರು ಪರವಾನಗಿ ಇಲ್ಲದೇ ಆಗಾಗ ಕೆರೆಯ ಮಣ್ಣನ್ನು ಎತ್ತಿಕೊಂಡು ಹೋಗುತ್ತಿದ್ದಾರೆ. ಹೇಳೋರು ಕೇಳೋರು ಯಾರೂ ಇಲ್ಲವೆಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕೆರೆ ಮಣ್ಣು ಕಳುವು 1

“ಕೆರೆಯ ಪಕ್ಕದ ಕೆಲವೇ ಅಂತರದಲ್ಲಿ ಲೇಔಟ್ ನಿರ್ಮಾಣವಾಗುತ್ತಿದ್ದು, ಇದರ ರಸ್ತೆ ನಿರ್ಮಾಣಕ್ಕಾಗಿ ಕೆರೆಯ ಮಣ್ಣನ್ನು ಬಳಸಿಕೊಳ್ಳುವ ಉದ್ದೇಶದಿಂದ ಮಣ್ಣನ್ನು ಕಳವು ಮಾಡಿ ರಾತ್ರೋರಾತ್ರಿ ಲೇಔಟಿನ ರಸ್ತೆಯಲ್ಲಿ ಹಾಕಲಾಗಿದ್ದು, ಬುಧವಾರ ಬೆಳಿಗ್ಗೆ ಗ್ರಾಮದ ಪ್ರಮುಖರು ಗಮನಿಸಿದಾಗ ಲೇಔಟ್ ಅಭಿವೃದ್ಧಿಗೆ ಬಳಸಿಕೊಂಡಿರುವುದಾಗಿ ತಿಳಿದುಬಂದಿದೆ.

Advertisements

ಕುಷ್ಟಗಿ ಪಟ್ಟಣದ ಗುತ್ತಿಗೆದಾರ ವಿಶ್ವನಾಥ ಕುಂಬಾರ ತಾವೇ ತಮ್ಮ ಲೇಔಟ್‌ನ ರಸ್ತೆಗೆ ಹಾಕಿಕೊಂಡಿರುವುದಾಗಿ ತಿಳಿಸಿದ್ದು, ಈ ಕಾರ್ಯಕ್ಕೆ ರಾತ್ರಿ ವೇಳೆಯಲ್ಲಿ ಒಂದು ಜೆಸಿಬಿ ಸೇರಿದಂತೆ ಆರರಿಂದ ಎಂಟು ಟ್ರ್ಯಾಕ್ಟರ್ ಬಳಕೆ ಮಾಡಿರುವುದಾಗಿ ಹೇಳಿದ್ದಾರೆ.

ಪರವಾನಗಿ ಇಲ್ಲದೆ ರಾತ್ರೋರಾತ್ರಿ ಕೆರೆಯ ಮಣ್ಣನ್ನು ಸಾಗಿಸಿದ ಈ ಗುತ್ತಿಗೆದಾರನಿಗೆ ಕಾನೂನಿನ ಅರಿವು ಇಲ್ಲವೇ ಎಂಬುವಂತೆ ಗ್ರಾಮದ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ʼನಾನೇ ಈ ಕಾರ್ಯ ಮಾಡಿಸಿದ್ದೇನೆʼ ಎಂದು ಗುತ್ತಿಗೆದಾರ ವಿಶ್ವನಾಥ ಕುಂಬಾರ ತನ್ನ ತಪ್ಪೊಪ್ಪಿಕೊಂಡಿದ್ದು, ಕ್ಷಮಿಸುವಂತೆ ಬೇಡಿಕೊಂಡಿರುತ್ತಾನೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಮೃದ್ಧ ದೇಶ ನಿರ್ಮಾಣದಲ್ಲಿ ಮಕ್ಕಳ ಆರೋಗ್ಯದ ಪಾತ್ರ ಮುಖ್ಯ: ಬಸವರಾಜ ಶರಾಬಿ

“ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಇಂತಹ ಘಟನೆಗಳು ಸಂಭವಿಸುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಕೃತ್ಯ ಎಸಿಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದುನೋಡಬೇಕಾಗಿದೆ” ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X