ಕೊಪ್ಪಳ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧ ಆರೋಪ ಸಾಬೀತು; ಗುರುವಾರ ಶಿಕ್ಷೆ ಪ್ರಕಟ

Date:

Advertisements

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ವಸತಿ ಪ್ರದೇಶಕ್ಕೆ ನುಗ್ಗಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿಮ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮತ್ತು ಅಸ್ಪೃಷ್ಯತೆ ಆಚರಣೆ ಮಾಡಿದ್ದ ಪ್ರಕರಣ 9 ವರ್ಷಗಳ ಹಿಂದೆ ನಡೆದಿತ್ತು. ಪ್ರಕರಣದಲ್ಲಿ 101 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಮತ್ತು ವಿಚಾರಣೆಯಲ್ಲಿ ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ಅಕ್ಟೋಬರ್ 24ರಂದು ಗುರುವಾರ ನ್ಯಾಯಾಲಯವು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಿದೆ ಎಂದು ವರಿಯಾಗಿದೆ.

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, 101 ಆರೋಪಿಗಳನ್ನು ಅಪರಾಧಿಗಳು ಎಂದು ಸೋಮವಾರ ಘೋಷಿಸಿದ್ದಾರೆ. ಗುರುವಾರ ಶಿಕ್ಷೆ ಪ್ರಕಟಿಸುವುದಾಗಿ ಹೇಳಿದ್ದು, ತೀರ್ಪು ಕಾಯ್ದಿರಿಸಿದ್ದಾರೆ.

2015ರಲ್ಲಿ ಮುರುಕುಂಬಿ ಗ್ರಾಮದಲ್ಲಿ ಕ್ಷೌರದಂಗಡಿ, ಹೋಟೆಲ್‌ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಈ ವಿಚಾಋವಾಗಿ ಪ್ರಬಲ ಜಾತಿಗಳು ಮತ್ತು ದಲಿತರ ನಡುವೆ ಜಗಳವಾಗಿತ್ತು. ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು. ಪ್ರಕರಣ ದಾಖಲಾದ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ದಲಿತರ ಮೇಲೆ ಹಲ್ಲೆ ನಡೆಸಿದ್ದರು.

Advertisements

ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮದ 117 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ನಡುವೆ ಕೆಲ ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ 101 ಮಂದಿಯ ವಿರುದ್ಧ ಅರೋಪ ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದ 100 ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X