ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಕೆ; ಸಾರ್ವಜನಿಕರ ಆಕ್ರೋಶ

Date:

Advertisements

ಗಣೇಶ ಚತುರ್ಥಿ ಪ್ರತಿಷ್ಠಾಪನೆ ದಿನ ಹಾಗೂ ವಿಸರ್ಜನೆ ದಿನ ಡಿಜೆ ಬಳಕೆಗೆ ಸುಪ್ರೀಂಕೋರ್ಟ್ ನಿಷೇಧದ ಆದೇಶ ಹೊರಡಿಸಿದ್ದರೂ ಕೊಪ್ಪಳ ಜಿಲ್ಲೆಯ ಭಾಗ್ಯನಗರದಲ್ಲಿ ಗಣೇಶ ವಿಸರ್ಜನೆ ದಿನ (ನಿನ್ನೆ ರಾತ್ರಿ 12-15ರವರೆಗೂ) ಡಿಜೆ ಬಳಕೆ ಮಾಡಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಧಾರ್ಮಿಕ ಮುಖಂಡರ ಹಾಗೂ ಎಲ್ಲಾ ಧಾರ್ಮಿಕ ಸಂಘಟನೆಗಳಿಗೆ ಶಾಂತಿ ಸಭೆ ಕರೆದು ಡಿಜೆ ಸಿಸ್ಟಮ್‌ಗಳನ್ನು ಬಳಸುವಂತಿಲ್ಲ ಎಂದು ಕಡ್ಡಾಯವಾಗಿ ಸೂಚನೆ ನೀಡಿದ್ದರು. ಆದರೂ ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಡಿಜೆ ಸಿಸ್ಟಮ್‌ನ ಕರ್ಕಶ ಶಬ್ದಕ್ಕೆ ಹೃದ್ರೋಗ ಪೀಡಿತರು, ಗರ್ಭಿಣಿಯರು, ಹಸುಗೂಸುಗಳು ಭಯಗೊಳ್ಳುವಂತ ವಾತಾವರಣ ಸೃಷ್ಟಿಯಾಗಿತ್ತು.

ಡಿಜೆಯ ಅತಿಯಾದ ಶಬ್ದಕ್ಕೆ ಮನೆಯೊಳಗಿನ ಪರಿಕರಗಳು ಅಲ್ಲಾಡುತ್ತಿದ್ದವು. ಮನೆಯ ಅಂಗಳಗಳು ದಗ್‌ ದಗ್ ಎಂದು ಶಬ್ದ ಮಾಡುತ್ತಿದ್ದವು. ನ್ಯಾಯಾಲಯದ ನಿಷೇಧದ ಆದೇಶವಿದ್ದರೂ ಪೊಲೀಸ್ ಮೌನವಹಿಸಿದ್ಯಾಕೆ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಆಟೋ ಪಲ್ಟಿ : 65 ವರ್ಷದ ಮಹಿಳೆ ಸಾವು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X