ಕೊಪ್ಪಳ | ಅಂತರ್ಜಾತಿ ಯುವತಿ ವಿವಾಹವಾಗಿದ್ದ ಯುವತಿಯ ಕೊಲೆ ಖಂಡಿಸಿ ‘ವಿಠಲಾಪುರ ಚಲೋ’ ಕಾಲ್ನಡಿಗೆ ಜಾಥಾ

Date:

Advertisements

ಕೊಪ್ಪಳ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ವಿಠಲಾಪುರ ಚಲೋ ಜಾಥಾವು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು.

ವಿಠಲಾಪುರ ಗ್ರಾಮದಿಂದ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಡಿವೈ ಎಸ್ ಪಿ ಸಿದ್ಧಲಿಂಗಪ್ಪ ಗೌಡ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಲಿತ ಮುಖಂಡ ಕರಿಯಪ್ಪ ಗುಡಿಮನಿ, “ಪ್ರೀತಿಸಿ ,ನಂಬಿಸಿ ವಿವಾಹವಾಗಿ ಆಕೆಯನ್ನು ಮಾದಿಗ ಜಾತಿ ಸೇರಿದ ಕಾರಣಕ್ಕೆ ವಿಷವುಣಿಸಿ ಹತ್ಯೆ ಮಾಡಲಾಗಿದೆ ಎಂದರೆ ಬೇಸರದ ಸಂಗತಿ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿದೆ ಹಾಗೂ ದಿನನಿತ್ಯ ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ಲಕ್ಷ್ಯವೇ ಕಾರಣ” ಎಂದು ಹೇಳಿದರು.

Advertisements
ಕೊಪ್ಪಳ 14

ಘಟನೆಗೆ ಸಂಬಂಧಿಸಿದಂತೆ ಯುವತಿ ಕುಟುಂಬಸ್ಥರು ಕನಕಗಿರಿ ಪೊಲೀಸ್‌ ಠಾಣೆಗೆ ದೂರು ಕೊಡಲು ಹೋದರೆ ಕೇಸ್ ತೆಗೆದುಕೊಳ್ಳದೆ ಸತಾಯಿಸಿ, ಹಿಂದೇಟು ಹಾಕಿದ್ದಾರೆ. ಠಾಣೆಯಲ್ಲಿ ಪಾಳೆಗಾರಿಕೆ ಆಳ್ವಿಕೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದರು.

ಜಾಥಾವನ್ನುದ್ದೇಶಿಸಿ ಮಾತನಾಡಿದ ವಕೀಲರಾದ ಹುಸೇನಪ್ಪ ಹಂಚಿನಾಳ, “ಜಿಲ್ಲೆಯ ಪ್ರತಿ ಹೋಟೆಲ್‌ಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಜಾತಿ ತಾರತಮ್ಯ ಮಾಡಬಾರದು ಎಂದು ಸೂಚನೆಗಳು ಹಾಕಬೇಕು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಇಲಾಖೆ ಇಂತಹ ಘಟನೆಗಳು ಸಂಭವಿಸಿದರೆ ಅದನ್ನು ಸರಿಯಾಗಿ ವಿಚಾರಣೆ ನಡೆಸುತ್ತಿಲ್ಲ ಹಾಗೂ ಜಾಗೃತಿ ಮೂಡಿಸುವುದಕ್ಕೆ ಮುಂದಾಗುತ್ತಿಲ್ಲ. ಜಿಲ್ಲೆಯನ್ನು ದೌರ್ಜನ್ಯ ಪೀಡಿತ ಜಿಲ್ಲೆ ಎಂದು ಸರಕಾರ ಘೋಷಣೆ ಮಾಡಿ, ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದಾವಣಗೆರೆ | ಮರಳಿನ ವಿಚಾರಕ್ಕೆ ಎರಡು ಗ್ರಾಮಸ್ಥರ ನಡುವೆ ಘರ್ಷಣೆ: ಚಾಕು ಇರಿತಕ್ಕೊಳಗಾಗಿದ್ದ ಓರ್ವ ಮೃತ್ಯು

ಜಾಥಾದಲ್ಲಿ ಕರ್ನಾಟಕ ಜನಶಕ್ತಿ ಮುಖಂಡ ಕುಮಾರ್ ಸಮತಳ, ಕೆವಿಎಸ್ ಮುಖಂಡ ದುರುಗೇಶ್ ಬರಗೂರು , ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು, ಟಿ ರತ್ನಾಕರ, ಶ್ರೀನಾಥ ಪೂಜಾರಿ, ಶುಕ್ರರಾಜ, ಸಿರಾಜ್ ಸಿದ್ದಾಪುರ, ಮಾರೆಪ್ಪ ಹರವಿ, ಎಂ ಆರ್ ಭೇರಿ, ಗುರುಬಸವ ಇನ್ನಿತರರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X