ಕೊಪ್ಪಳ | ದಾಖಲೆ ಇಲ್ಲದೇ ಸಾಗಿಸುತ್ತಿದ್ದ 60 ಲಕ್ಷ ರೂ. ಹಣ ವಶ; ನಾಲ್ವರ ಬಂಧನ

Date:

  • ಖಚಿತ ಮಾಹಿತಿ ಆಧಾರದ ಮೇಲೆ ದಾಳಿ
  • ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಣೆ, ಮದ್ಯ ಮಾರಾಟ ಹಾಗೂ ಇನ್ನಿತರ ಅಕ್ರಮಗಳ‌‌‌ ಮೇಲೆ ಜಿಲ್ಲಾ ಪೊಲೀಸ್ ಇಲಾಖೆಯು ತೀವ್ರ ನಿಗಾ ಇಟ್ಟಿರುವ ಪೊಲೀಸ್‌ ಅಧಿಕಾರಿಗಳು ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಲಕ್ಷಾಮತರ ಹಣ ಜಪ್ತಿ ಮಾಡಿದ್ದಾರೆ.

ಮಾ.24ರ ತಡರಾತ್ರಿ ಕೊಪ್ಪಳದಿಂದ ಗಂಗಾವತಿ ಕಡೆ ತೆರಳುತ್ತಿದ್ದ ಕೆಎ-37/ಎನ್-4323 ಸಂಖ್ಯೆಯ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಸಾಪಟ್ಟಣದ ಹತ್ತಿರ ದಾಳಿ ಮಾಡಿ, 500 ರೂ. ಮುಖಬೆಲೆಯ 60 ಲಕ್ಷ ರೂ. ಹಣ ಜಪ್ತಿ ಮಾಡಿದ್ದಾರೆ.

ಕಾರಿನಲ್ಲಿದ್ದ ವೆಂಕಟೇಶ ಸಿಂಗನಾಳ, ವೀರಭದ್ರಪ್ಪ ಪಲ್ಲೇದ, ವಿರುಪಾಕ್ಷಗೌಡ ಪಾಟೀಲ್‌, ಕಾರು ಚಾಲಕ ಅಬ್ದುಲ್ ರಜಾಕ್ ಎಂಬುವವರನ್ನು ವಿಚಾರಣೆ ನಡೆಸಿ, ದಾಖಲೆಗಳನ್ನು ನೀಡದ ಹಿನ್ನಲೆಯಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹಣದ ಮೂಲ ಪರಿಶೀಲಿಸಲು ಆದಾಯ ತೆರಿಗೆ ಅಧಿಕಾರಿಗಳಿಗೆ ಪತ್ರ ವ್ಯವಹಾರ ಮಾಡಲಾಗಿದ್ದು, ದಾಖಲೆ ಇಲ್ಲದ 60 ಲಕ್ಷ ರೂಪಾಯಿ ಹಣ ಹಾಗೂ 5 ಲಕ್ಷ ಬೆಲೆಯ 1 ಕಾರು ವಶಪಡಿಸಿಕೊಂಡಿರುವುದಾಗಿ ಎಸ್ಪಿ ಕಚೇರಿಯ ಪ್ರಕಟಣೆ ಹೊರಡಿಸಿದೆ.

ಅಧಿಕಾರಿ ಸಿಬ್ಬಂದಿಗೆ ಅಭಿನಂದನೆ

ಕೊಪ್ಪಳ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಅವರು ಅಕ್ರಮ ಹಣ ಸಾಗಣೆ ಮೇಲೆ ವಿಶೇಷ ನಿಗಾ ವಹಿಸಿ ದಾಳಿ ನಡೆಸಿದ್ದ ಗಂಗಾವತಿಯ ಡಿವೈಎಸ್ಪಿ ಶೇಖರಪ್ಪ ಹೆಚ್ ಹಾಗೂ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಸಿಬ್ಬಂದಿಯ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ...

Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಗಜೇಂದ್ರಗಡ | ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್ಎಫ್‌ಐ ಆಗ್ರಹ

ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು...

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...