ಕೊಪ್ಪಳ | ಬುಲ್ಡೋಟಾ ವಿಸ್ತರಣೆ ತಡೆಯುವಂತೆ ಕೇಂದ್ರ ಸಚಿವ ಎಚ್‌ಡಿಕೆಗೆ ಮನವಿ

Date:

ಕೊಪ್ಪಳದಲ್ಲಿ ಬುಲ್ಡೋಟಾ, ಎಮ್‌ಎಸ್‌ಪಿಎಲ್, ಬಿಎಸ್‌ಪಿ‌ಎಲ್ ಕೈಗಾರಿಕಾ ಕಾರ್ಖಾನೆ ಘಟಕ ವಿಸ್ತರಣೆ ತಡೆಯುವಂತೆ ಹಾಗೂ ಬಸಾಪೂರದ 44.35 ಎಕರೆ ಸಾರ್ವಜನಿಕ ಕೆರೆ ರಕ್ಷಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿತು.

- Advertisement -

“ಜಿಲ್ಲೆಯು ತುಂಗಭದ್ರಾ ಯೋಜನೆಯನ್ನು ಅವಲಂಬಿಸಿದ ಫಲವತ್ತಾದ ಭೂಮಿ, ಉತ್ತಮ ಹವಾಗುಣ ಇರುವ ಕೃಷಿ ಪ್ರಧಾನ ಆರ್ಥಿಕತೆಯನ್ನು ಹೊಂದಿರುವ ಜಿಲ್ಲೆಯಾಗಿದೆ. ತುಂಗಭದ್ರಾ ನೀರು ಮತ್ತು ಅಗ್ಗದ ಭೂಮಿ ಕಬಳಿಸಿ, ಕೊಪ್ಪಳ ತಾಲೂಕು ಒಂದರಲ್ಲೇ 30 ಬೃಹತ್ ಸ್ಪಾಂಜ್ ಐರನ್, ಪೆಲೆಟ್ ಗೋಲಿ, ರಾಸಾಯನಿಕ ಗೊಬ್ಬರ, ಸಿಮೆಂಟ್, ಉಕ್ಕು ತಯಾರಿಕೆ ಮಾಡಲು ಇಲ್ಲಿನ ಪರಿಸರ ಸಹಿಸಿಕೊಳ್ಳಲಾರದಷ್ಟು, ಧಾರಣಾ ಸಾಮರ್ಥ್ಯ ಮೀರಿ ಕಾರ್ಖಾನೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಸಾರ್ವಜನಿಕರು ಮಾರಣಾಂತಿಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕೂಡಲೇ ಈ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಸಮಿತಿಯ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಳೆದ 14 ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಬುಲ್ಡೋಟಾ, ಎಮ್‌ಎಸ್‌ಪಿ‌ಎಲ್, ಬಿಎಸ್‌ಪಿ‌ಎಲ್ ಉತ್ಪತ್ತಿ ಮಾಡುತ್ತಿರುವ ಕಾರ್ಖಾನೆ ಹೊರ ಸೂಸುವ ಕಪ್ಪು ಧೂಳು, ಹೊಗೆಯಿಂದ ಭಾಗ್ಯನಗರದ ಸುಮಾರು 1.5 ಲಕ್ಷ ಜನರು ಈಗಾಗಲೇ ಬಾಧಿತರಾಗಿ ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಕೇವಲ 4 ಮಂದಿ ವೈದ್ಯರಿದ್ದ ಕೊಪ್ಪಳದಲ್ಲಿ ನೂರಾರು ವೈದ್ಯರು ಈಗ ಆಸ್ಪತ್ರೆ ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

“ಕೈಗಾರಿಕೆಗಳು ಕೇಂದ್ರೀಕರಣಗೊಂಡಿರುವ ಗಿಣಿಗೇರಿ, ಹಿರೇಬಗನಾಳ, ಚಿಕ್ಕಬಗನಾಳ, ಲಾಚನಕೇರಿ, ಕುಣಿಕೇರಿ, ಕುಣಿಕೇರಿ ತಾಂಡಾ, ಅಲ್ಲಾನಗರ, ಹಿರೇಕಾಸನಕಂಡಿ, ಹೊಸ ಕನಕಾಪುರ, ಕನಕಾಪುರ ತಾಂಡಾ, ಹಾಲವರ್ತಿ, ಕಿಡದಾಳ, ಬೆಳವಿನಾಳ, ಹೊಸ ಕನಕಾಪುರ, ಬೇವಿನಹಳ್ಳಿ, ಶಹಾಪುರ, ಕೆರೆಹಳ್ಳಿ, ಲಿಂಗದಳ್ಳಿ, ಹಳೆ ಕನಕಾಪುರ, ಬಸಾಪೂರ, ಹಿಟ್ನಾಳ ಮತ್ತು ಹುಲಿಗಿ ಗ್ರಾಮಗಳ ಹತ್ತಾರು ಸಾವಿರ ಕುಟುಂಬಗಳು, ಕಾರ್ಖಾನೆಗಳು ಹೊರ ಸೂಸುವ ಧೂಳು, ಹೊಗೆ ಉಸಿರಾಡಿ ಅನಾರೋಗ್ಯದ ಪರಿಣಾಮಗಳನ್ನು ತೀವ್ರವಾಗಿ ಎದುರಿಸುತ್ತಿವೆ.

ಮಾನವ ವಿನಾಶಕಾರಿಯಾದ ವಿದ್ಯುತ್ ಅಣುಸ್ಥಾವರವನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಭೂಮಿಯ ಹುಡುಕಾಟ ನಡೆಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು. ಈ ಭೂಮಿಯಲ್ಲಿ ಸಾಕಷ್ಟು ಹಣ್ಣು-ಹಂಪಲು, ತರಕಾರಿ, ಹೂ ಬೆಳೆದು ಬದುಕುತ್ತಿದ್ದ ರೈತರ ಬದುಕು ಈ ಕಾರ್ಖಾನೆಗಳಿಂದ ತುಂಗಭದ್ರಾ ನೀರು ಮಾಲಿನ್ಯ, ಫಲವತ್ತಾಗಿದ್ದ ಭೂಮಿ ಮಾಲಿನ್ಯ, ಹೊಗೆಯಿಂದ ಗಾಳಿ ಮಾಲಿನ್ಯವಾಗಿ ಲಕ್ಷಗಟ್ಟಲೆ ಜನರು ರೋಗ ರುಜಿನಗಳಿಗೆ ತುತ್ತಾಗಿ, ಅನಾರೋಗ್ಯದಿಂದ ಸಾಯುತ್ತಿರುವದನ್ನು ತಪ್ಪಿಸಲು ಮುಂದಾಗಬೇಕು ಎಂದು ಸಮಿತಿ ಆಗ್ರಹಿಸಿತು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ; ಕೇಂದ್ರಕ್ಕೆ ಪ್ರಸ್ತಾವನೆ ಬಂದಿಲ್ಲವೆಂದ ಎಚ್‌ಡಿಕೆ

ಈ ವೇಳೆ ಅಲ್ಲಮಪ್ರಭು ಬೆಟ್ಟದೂರು, ಕೆ.ಬಿ.ಗೋನಾಳ, ಬಸವರಾಜ ಶೀಲವಂತರ, ಶರಣು ಗಡ್ಡಿ, ಎಸ್.ಎ.ಗಫಾರ್, ಮುದಕಪ್ಪ ಹೊಸಮನಿ, ಶಿವಪ್ಪ ಹಡಪದ, ಮಕಬೂಲ್ ರಾಯಚೂರು, ದುರಗಪ್ಪ ಕನಕ, ಮೂಕಪ್ಪ ಮೇಸ್ತ್ರಿ ಬಸಾಪೂರ, ಮಂಗಳೇಶ ರಾಠೋಡ ಗಿಣಿಗೇರಿ, ಹನುಮಂತ ಕಟಗಿ ಗಿಣಿಗೇರಿ ಹಾಗೂ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...