ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

Date:

  • ಕ್ರೈಸ್ತ ಕಿಂಗ್ ಶಾಲೆಯ ಆವರಣದಲ್ಲಿದ್ದ ಮರದಲ್ಲಿ ಗೂಡು ಕಟ್ಟಿದ್ದ ಜೇನು
  • ಜೇನು ದಾಳಿಗೆ ಒಳಗಾದ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

ಜೇನುನೊಣಗಳ ದಾಳಿಗೆ ಒಳಗಾಗಿದ್ದರೂ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಕ್ರೈಸ್ತ ಕಿಂಗ್‌ ಶಾಲೆಯಲ್ಲಿ ನಡೆದಿದೆ.

- Advertisement -

ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಆದರ್ಶ ವಿದ್ಯಾಲಯದ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಭಾನುವಾರ(26) ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ದಾಳಿಗೆ ಒಳಗಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿಯೇ ಪರೀಕ್ಷೆ ಬರೆದಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಜಿಲ್ಲೆಯ ಕುಷ್ಟಗಿ ತಾಲೂಕಿನ ಬುತ್ತಿಬಸವೇಶ್ವರ ಪ್ರೌಢಶಾಲೆ ಹಾಗೂ ಜೂನಿಯರ್‌ ಕಾಲೇಜು, ಗುರುಚನ್ನಬಸವೇಶ್ವರ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಜೂನಿಯರ್‌ ಕಾಲೇಜು (ಪ್ರೌಢಶಾಲೆ ವಿಭಾಗ), ಬಾಲಕರ ಜೂನಿಯರ್‌ ವಿಭಾಗ (ಪ್ರೌಢಶಾಲೆ ವಿಭಾಗ), ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ, ಕ್ರೈಸ್ತ ಕಿಂಗ್‌ ಶಾಲೆಗಳು ಪ್ರವೇಶ ಪರೀಕ್ಷಾ ಕೇಂದ್ರಗಳಾಗಿದ್ದವು.

ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ, ತಳುವಗೇರಾ, ನಿಡಶೇಷಿ ಸೇರಿದಂತೆ ಹಲವು ಗ್ರಾಮಗಳಿಂದ ವಿದ್ಯಾರ್ಥಿಗಳು ಕ್ರೈಸ್ತ ಕಿಂಗ್‌ ಶಾಲೆಯಲ್ಲಿ ಪರೀಕ್ಷೆ ಬರೆಯಲು ಬಂದಾಗ ಈ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಬೆಳೆದ ಮರದಲ್ಲಿ ಜೇನುಗೂಡು ಕಟ್ಟಿದ್ದು, ಏಕಾಏಕಿ ವಿದ್ಯಾರ್ಥಿಗಳು, ಪಾಲಕರ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

“ಜೇನುನೊಣ ದಾಳಿಗೆ ಒಳಗಾದ ಹಲವು ವಿದ್ಯಾರ್ಥಿಗಳ ಪೈಕಿ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಒಂದು ಕೈಗೆ ಗ್ಲೂಕೋಸ್‌ ಹಾಕಿಸಿಕೊಂಡೇ ಪರೀಕ್ಷೆ ಬರೆದಿದ್ದಾರೆ. ಜೇನುನೊಣ ದಾಳಿಗೆ ಒಳಗಾದ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ಹೊರಗುಳಿದಿಲ್ಲ. ಆಸ್ಪತ್ರೆಯಲ್ಲಿ ನಮ್ಮ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಿ ಮೂವರು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಿಂದಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ ಎ ರೆಡ್ಡೇರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...