ಕೊಪ್ಪಳ | ಮಗು ಮನುಕುಲದ ಆಸ್ತಿಯಾಗಬೇಕು: ಮೇಘಾಲಯ ರಾಜ್ಯಪಾಲ ಚಂದ್ರಶೇಖರ

Date:

Advertisements

ಮಗುವನ್ನು ಮನುಕುಲದ ಆಸ್ತಿಯನ್ನಾಗಿ ಮಾಡುವ ಬಹುದೊಡ್ಡ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಮೇಘಾಲಯ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ್ ಹೇಳಿದರು.

ನಿನ್ನೆ ಕರ್ನಾಟಕಕ್ಕೆ ಭೇಟಿ ನೀಡಿದ ವೇಳೆ ದಿವ್ಯಾಂಗ ಮಕ್ಕಳ ಶಾಲೆ, ಹಿಂದು ಸೇವಾ ಪ್ರತಿಷ್ಠಾನ ಮತ್ತು ಮಹಾತ್ಮಗಾಂಧಿ ಅನಾಥ ಸೇವಾ ಟ್ರಸ್ಟ್ ಸಹಯೋಗದಲ್ಲಿ ಕೊಪ್ಪಳ ನಗರದಲ್ಲಿ ನಡೆಸುತ್ತಿರುವ ಅರುಣ ಚೇತನ ದಿವ್ಯಾಂಗ ಮಕ್ಕಳ ಶಾಲೆಗೆ ಭೇಟಿ ನೀಡಿದ್ದರು.

“ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಪೌಷ್ಟಿಕ ಆಹಾರ ಸಿಗಬೇಕು. 4 ರಿಂದ 14 ವರ್ಷದಲ್ಲಿ ಮಕ್ಕಳ ಶಾರೀರಿಕ ಬೆಳೆವಣಿಗೆ ಜೊತೆಗೆ ಅವರ ಮಾನಸಿಕ ಬೆಳವಣಿಗೆ ಸಹ ಆಗುತ್ತದೆ. ಕೆಲವೊಂದು ಮಕ್ಕಳ ಶಾರೀರಿಕ ಅಂಗವೈಕಲ್ಯ ಅನಿವಂಶೀಯವಾಗಿ ಬರುತ್ತದೆ. ಅವರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸುವ ಕೆಲಸ ಮಾಡಬೇಕು” ಎಂದರು.

Advertisements
WhatsApp Image 2025 02 22 at 7.22.34 PM

“ಸಂಬಂಧಿಸಿದ ಇಲಾಖೆಯ ಮೂಲಕ ದಿವ್ಯಾಂಗ ಮಕ್ಕಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕೆಲಸ ಆಗಬೇಕು. ಮೈಸೂರಿನಲ್ಲಿ ಸ್ಪೀಚ್ ಆ್ಯಂಡ್ ಹಿಯರಿಂಗ್ ಸಂಸ್ಥೆ ಇದೆ. ಇದು ಮೈಸೂರು ಮಹಾರಾಜರು ಪ್ರಾರಂಭಿಸಿದ್ದರು. ಈ ಸಂಸ್ಥೆ ಇಂತಹ ವಿಶೇಷ ಚೇತನ ಮಕ್ಕಳ ಸರ್ವೆಯನ್ನು ಆಗಾಗ ನಡೆಸುತ್ತದೆ. ನಮ್ಮ ಮಕ್ಕಳು ಆರೋಗ್ಯ ಪೂರ್ಣವಾಗಿ ಬದುಕಬೇಕು. ಸತ್ಯಸಾಯಿ ಟ್ರಸ್ಟಿನ ಮಧುಸೂಧನ್ ಬಾಬಾ ಅವರು ಇಂತಹ ವಿಶೇಷ ಚೇತನ ಮಕ್ಕಳಿಗೆ ಉಚಿತ ಸೇವೆ ನೀಡುತ್ತಾರೆ. ಅವರಿಗೆ ಇಲ್ಲಿಗೆ ಬರಲು ತಿಳಿಸುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಪದ್ಮಶ್ರೀ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಮನೆಗೆ ಮೇಘಾಲಯ ರಾಜ್ಯಪಾಲ ಭೇಟಿ: ಸನ್ಮಾನ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಹಿಂದೂ ಸೇವಾ ಪ್ರತಿಷ್ಠಾನ ಸಂಸ್ಥೆಯ ಎಂ.ಡಿ ಮಿಲಿಂದ್, ಸಂಚಾಲಕ ಸುಧಾಕರ್, ಮಹೇಶ ನಾಲ್ವಾಡ್, ರಾಜೇಂದ್ರ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅರುಣ ಚೇತನ ದಿವ್ಯಾಂಗ ಮಕ್ಕಳ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X