ಕೊಪ್ಪಳ | ಕಾಮುಕ ಪ್ರೇಮಿಯಿಂದ ಪ್ರೇಯಸಿ ಮೇಲೆ ನಿರಂತರ ಅತ್ಯಾಚಾರ

Date:

Advertisements

ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿ ಮೇಲೆಯೇ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ನಡೆದಿದೆ.

ವಿವಾಹಕ್ಕೂ ಮುನ್ನವೇ ಲೈಂಗಿಕ ಸಂಬಂಧಕ್ಕೆ ಯುವತಿ ಒಪ್ಪದಿದ್ದರೂ, ಮದುವೆಯಾಗುತ್ತೇನೆಂದು ಆರೋಪಿ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿಲಾಗಿದೆ. ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗಾವತಿ ತಾಲೂಕಿನ ನಿವಾಸಿ ರವಿರಾಜ್ ಅತ್ಯಾಚಾರ ಎಸಗಿರುವ ಕಾಮುಕ ಆರೋಪಿ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಆತನನ್ನು ಕೂಡಲೇ ಬಂಧಿಸಿ ಎಂದು ಸಂತ್ರಸ್ತೆ ಕಾರಟಗಿ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾಳೆ.

Advertisements

2020ರಲ್ಲಿ ಸಂತ್ರಸ್ತ ಯುವತಿಗೂ ರವಿರಾಜ್‌ಗೂ ಪರಿಚಯವಾಗಿತ್ತು. 2021ರಿಂದ ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಎರಡೂ ಕುಟುಂಬದಿಂದಲೂ ವಿರೋಧವಿತ್ತು. ಅದಾಗ್ಯೂ, ರವಿರಾಜ್ ಸಂತ್ರಸ್ತೆ ಮತ್ತು ತನ್ನ ಕುಟುಂಬದವರನ್ನು ಮದುಗೆವೆ ಒಪ್ಪಿಸಿದ್ದ. ಅಲ್ಲದೆ, 2021ರ ಮಾರ್ಚ್‌ 17ರಂದು ಆಕೆಗೆ ಮನೆಗೆ ಹೋಗಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವನ್ನು ವಿಡಿಯೋ ಮಾಡಿಕೊಂಡು, ಬ್ಲಾಕ್‌ಮೇಲ್ ಮಾಡಿ, ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಯುವತಿ ಈಗ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನು ಮಾಡಿಸಿದ್ದಾನೆ. ಬಳಿಕ, ಯುವತಿ ವಿವಾಹವಾಗುವಂತೆ ಒತ್ತಡ ಹಾಕಿದರೂ, ಆರೋಪಿ ಮದುವೆ ಒಪ್ಪಿಲ್ಲ. ಯುವತಿ ಎರಡೂ ಕುಟುಂಬದವರಿಗೆ ತನ್ನ ಮೇಲಾದ ಕೃತ್ಯದ ಬಗ್ಗೆ ವಿವರಿಸಿದ್ದು, ಎರಡೂ ಕುಟುಂಬದವರೂ ಮದುವೆ ಮಾಡಿಕೊಳ್ಳುವಂತೆ ಆರೋಪಿ ರವಿರಾಜ್‌ಗೆ ಒತ್ತಾಯಿಸಿದ್ದಾರೆ. ಆದರೂ, ಆತ ವಿವಾಹಕ್ಕೆ ನಿರಾಕರಿಸಿದ್ದು, ಯುವತಿ ಆತ್ಮಹತ್ಯೆಗೂ ಯತ್ನಿಸಿದ್ದಾಳೆ. ಇದೀಗ, ಪೊಲೀಸ್‌ ಠಾಣೆಗೆ ದೂರು ದಾಖಲಿಸಿ, ಆರೋಪಿ ಬಂಧನಕ್ಕೆ ಒತ್ಥಾಯಿಸಿ ಧರಣಿ ಕುಳಿತಿದ್ದಾಳೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X