ಕೊಪ್ಪಳ | ಎಂಎಸ್‌ಪಿ‌ಎಲ್ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೋ ಜಾಗೃತಿ ಆಂದೋಲನ

Date:

Advertisements

ಎಂಎಸ್‌ಪಿ‌ಎಲ್ ವಿಸ್ತರಣೆ ವಿರೋಧಿಸಿ ಜಿಲ್ಲಾ ಕೇಂದ್ರ ನಗರ ಹಾಗೂ ಕಾರ್ಖಾನೆಗಳಿರುವ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಆಂದೋಲನ ನಡೆಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲ ಸಮಿತಿಯು ನಿರ್ಧರಿಸಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಮೂರನೇ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ “ಎಂಎಸ್‌ಪಿ‌ಎಲ್ ಬಲ್ಡೋಟಾ ಇತರೆ 50ಕ್ಕೂ ಹೆಚ್ಚು ಕಾರ್ಖಾನೆಗಳ ಬೂದಿ, ಧೂಳು ಪರಿಸರ ಮಾಲಿನ್ಯದಿಂದ ನಗರ ಹಾಗೂ ಸುತ್ತಲಿನ ಗ್ರಾಮಗಳ ಜನರು ಹಲವು ರೋಗಕ್ಕೆ ತುತ್ತಾಗಿ ತೊಂದರೆ ಅನುಭವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಆದಾಗ್ಯೂ ಎಂಎಸ್‌ಪಿಎಲ್‌ ಕಾರ್ಖಾನೆಗಳ ವಿಸ್ತರಣೆಗೆ ಮುಂದಾಗಿರುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದವು.

ಎರಡು ದಿನಗಳಿಂದ ಬೆಂಗಳೂರಿನಲ್ಲಿ ನಡೆದಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಎಂಎಸ್‌ಪಿ‌ಎಲ್ ಬಲ್ಡೋಟಾ ಕಂಪನಿಯು 54 ಸಾವಿರ ಕೋಟಿ ವೆಚ್ಚದಲ್ಲಿ ಕಾರ್ಖಾನೆ ವಿಸ್ತರಿಸಲು ಘೋಷಿಸಿದೆ. ಕಾರ್ಖಾನೆ ವಿಸ್ತರಣೆಯಾದರೆ ಶೇ:5 ರಷ್ಟು ತ್ಯಾಜ್ಯ ಧೂಳು ಹೆಚ್ಚಾಗುತ್ತದೆ. ಫೆಬ್ರುವರಿ 17 ರಿಂದ 21 ರವರೆಗೆ ಕೊಪ್ಪಳ ಜಿಲ್ಲಾ ಕೇಂದ್ರದ ನಗರ ಮತ್ತು ತಾಲೂಕಿನ ಕಾರ್ಖಾನೆಗಳ ಗ್ರಾಮೀಣ ಭಾಗಗಳಲ್ಲಿ ಜಾಗೃತಿ ಆಂದೋಲ ನಡೆಸಲು ಮತ್ತು ಕೊಪ್ಪಳ ನಗರದಲ್ಲಿ ಫೆಬ್ರವರಿ 22ರಂದು ಬೃಹತ್ ವಿಚಾರ ಸಂಕೀರ್ಣ ಕಾರ್ಯಕ್ರಮದಲ್ಲಿ ಪರಿಸರ ವಿಜ್ಞಾನಿ ನಾಗೇಶ್ ಹೆಗ್ಡೆ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

Advertisements

ಅಪಾಯಕಾರಿಯಾದ ಮಾನವ ವಿನಾಶದ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ನಡೆದಿರುವ ಸಿದ್ದತೆ ಕುರಿತು ಚರ್ಚಿಸಲಾಯಿತು. ರಾಜ್ಯ ಬಿಜೆಪಿ, ಕಾಂಗ್ರೆಸ್, ಜೆಡಎಸ್ ಸಂಸದರು ಪಾರ್ಲಿಮೆಂಟಿನಲ್ಲಿ ಈ ಬಗ್ಗೆ ಧ್ವನಿ ಎತ್ತಲು ಒತ್ತಾಯಿಸಲು ನಿರ್ಧರಿಸಲಾಯಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ, ಕೊಪ್ಪಳ ಜಿಲ್ಲೆಯ ಪ್ರಗತಿಪರರ, ಪರಿಸರವಾದಿಗಳ ಮತ್ತು ಪ್ರಜ್ಞಾವಂತರ ಭಾರಿ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ವಿವಿ ಮುಚ್ಚಲು ಮುಂದಾದರೆ ಜನಪ್ರತಿನಿಧಿಗಳ ವಿರುದ್ಧ ಹೋರಾಟದ ಎಚ್ಚರಿಕೆ

ಸಭೆಯಲ್ಲಿ ಹಿರಿಯ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರ, ಮಹಾಂತೇಶ ಕೊತ್ತಬಾಳ, ಡಿ ಹೆಚ್ ಪೂಜಾರ, ಹನುಮಂತಪ್ಪ ಹೊಳೆಯಾಚೆ, ಬಸವರಾಜ ಶೀಲವಂತರ, ಟಿ ರತ್ನಾಕರ ಕುಕನೂರ, ಖಾಸೀಮ್ ಸರ್ದಾರ, ಶರಣು ಗಡ್ಡಿ, ಜ್ಯೋತಿ ಗೊಂಡಬಾಳ, ಕೆ ಬಿ ಗೋನಾಳ, ಕಾಶಪ್ಪ ಚಲವಾದಿ, ರಾಘು ಚಾಕರಿ, ರಾಮಣ್ಣ ಚೌಡಕಿ, ಮುದುಕಪ್ಪ ಹೊಸಮನಿ ನರೆಗಲ್, ಮೂಕಪ್ಪ ಬಸಾಪುರ, ಶಿವಪ್ಪ ಹಡಪದ್ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X