ಕೊಪ್ಪಳ | ದಾರುಣ ಘಟನೆ: ದಲಿತ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ

Date:

Advertisements

ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೆ ಕತ್ತರಿಯಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ನಡೆದಿದೆ.

ಯಮನೂರಪ್ಪ ಈರಪ್ಪ ಬಂಡಿಹಾಳ ಮೃತ ದಲಿತ ಯುವಕ ಎಂದು ಗುರುತಿಸಲಾಗಿದೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ .

Advertisements

ಇದನ್ನು ದಲಿತ ಯುವಕ ಪ್ರಶ್ನಿಸಿದ್ದಕ್ಕೆ , ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಯುವಕ ಧರ್ಮರಾಜ್ ಮಾಹಿತಿ ನೀಡಿದ್ದಾನೆ.

ಸಂಗನಾಳ ಗ್ರಾಮದ ಇಡೀ ದಲಿತ ಸಮುದಾಯದವರನ್ನು ಹೇರ್ ಕಟ್ಟಿಂಗ್ ಮಾಡಿಸಲು ಅವಕಾಶ ನೀಡುತ್ತಿಲ್ಲ. ಯಲಬುರ್ಗಾ ತಾಲೂಕಿಗೆ ಹೋಗಿ ಹೇರ್ ಕಟ್ ಮಾಡಿಸುತ್ತಾ ಬಂದಿದ್ದೇವೆ. ದಲಿತರೆಂಬ ಕಾರಣಕ್ಕೆ ಅಸ್ಪೃಶ್ಯತೆ ಆಚರಣೆ ನಡೆಯುತ್ತಿದೆ ಎಂದು ಗ್ರಾಮದ ದಲಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1001362265

ಹಲವಾರು ಸಮುದಾಯಗಳ ಜನರ ಕ್ಷೌರ ಮಾಡಲಾಗುತ್ತದೆ. ಆದರೆ ದಲಿತ ಸಮುದಾಯದವರಿಗೆ ಮಾತ್ರ ಮಾಡಲ್ಲ. ಯಾವ ಕಾರಣಕ್ಕೆ ಅಂತ ಪ್ರಶ್ನಿಸಿದರೆ, ಕೊಲೆ ಮಾಡುವ ಹಂತಕ್ಕೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಲಬುರ್ಗಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಕೂಡಲೇ ಆರೋಪಿ ಮುದುಕಪ್ಪ ಹಡಪದನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಈ ದಿನ. ಕಾಮ್ ತಂಡ ಗ್ರಾಮಕ್ಕೆ ತೆರಳಿದೆ‌.

1001362375
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X