ಕೊಪ್ಪಳ | ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ

Date:

ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

- Advertisement -

ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಾಲ್‌ಗೆ 5,650 ರೂ.ಗಳಂತೆ ಎಕರೆಗೆ 4 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್‌ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲ್ಲೂಕಿನ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ, ಕನಕಗಿರಿ ತಾಲೂಕಿನ ನವಲಿ ಹಾಗೂ ಕನಕಗಿರಿ. ಕುಷ್ಟಗಿ ತಾಲೂಕಿನ ಹನುಮಸಾಗರ, ತಾವರಗೇರಾ (ಮೆಣೇದಾಳ) ಹಾಗೂ ಕುಷ್ಟಗಿ. ಕುಕನೂರು ತಾಲೂಕಿನ ಚಿಕ್ಕಿನಕೋಪ್ಪ, ಬನ್ನಿಕೋಪ್ಪ, ತಳಕಲ್, ಮುಡಲಗೇರಿ, ಕುಕನೂರಿನಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಯಲಬುರ್ಗಾ, ಮುಧೋಳ ಹಾಗೂ ತೊಂಡಿಹಾಳದಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನೋಡಲ್ ಅಧಿಕಾರಿಗಳ ವಿವರ: ಕಡಲೆಕಾಳು ಖರೀದಿ ಕೇಂದ್ರಗಳಾದ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ ಖರೀದಿ ಕೇಂದ್ರಗಳಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದೆ.

ನವಲಿ ಹಾಗೂ ಕನಕಗಿರಿ ಖರೀದಿ ಕೇಂದ್ರಕ್ಕೆ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹರೀಶ ಪತ್ತಾರ ಮೊ.ಸಂ: 9060893320. ಕುಷ್ಟಗಿ ಹನುಮಸಾಗರ, ತಾವರಗೇರಾ (ಮೆಣೇದಾಳ) ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸುರೇಶ ಬಿ ತಂಗನೂರು ಮೊ.ಸಂ: 9880886909. ಚಿಕ್ಕಿನಕೋಪ್ಪ, ಬನ್ನಿಕೋಪ್ಪ, ತಳಕಲ್, ಮುಡಲಗೇರಿ, ಕುಕನೂರು, ಹಾಗೂ ಯಲಬುರ್ಗಾ, ಮುಧೋಳ ಮತ್ತು ತೊಂಡಿಹಾಳದಲ್ಲಿ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಇದನ್ನು ಓದಿದ್ದೀರಾ? ಅನಾರೋಗ್ಯದಿಂದ ಬಳಲುತ್ತಿರುವ ನಟಿ, ಬಿಜೆಪಿ ನಾಯಕಿ ಖುಷ್ಬೂ; ಬದಲಾದ ಮುಖಚರ್ಯೆ

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕಡಲೆಕಾಳು ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಕಡಲೇಕಾಳನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳ ದೂ.ಸಂ: 08539-230040, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...