ಕೊಪ್ಪಳ | ಫೀಸ್ ಬಾಕಿ ಇರಿಸಿದ್ದಕ್ಕೆ ವಿದ್ಯಾರ್ಥಿಗಳನ್ನು ಕೋಣೆಯಲ್ಲಿ ಕೂಡಿ ಹಾಕಿಟ್ಟ ಶಾಲಾಡಳಿತ!

Date:

Advertisements

ಶಾಲೆಯ ಶುಲ್ಕವನ್ನು ಪಾವತಿ ಮಾಡಿಲ್ಲ ಎಂದು ವಿದ್ಯಾರ್ಥಿಗಳನ್ನು ಶಾಲೆಯ ಕೋಣೆಯಲ್ಲಿ ಕೂಡಿ ಹಾಕಿಟ್ಟ ಘಟನೆ ಕೊಪ್ಪಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕೊಪ್ಪಳ ನಗರದ ನಿವೇದಿತಾ ಶಾಲೆಯಲ್ಲಿ ಶಾಲೆಯ ಶುಲ್ಕ ಕಟ್ಟಿಲ್ಲ ಎಂದು ಮನೆಗೆ ಬಿಡದೆ ಸುಮಾರು 20 ಮಕ್ಕಳನ್ನು ಶಾಲೆಯ ಕೋಣೆಯಲ್ಲಿ ಕೂಡಿ ಹಾಕಲಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.

ಶಾಲೆ ಬಿಟ್ಟರೂ ಮಕ್ಕಳನ್ನು ಬಿಡದೆ ಕೋಣೆಯಲ್ಲಿ ಬಂಧಿಸಿ ಪಾಲಕರು ಬರುವವರೆಗೂ ಬಿಡಬಾರದು ಎಂಬ ಉದ್ದೇಶದಿಂದ ಕೂಡಿ ಹಾಕಿದ್ದರು ಎನ್ನಲಾಗಿದೆ. ಪಾಲಕರು ಶಾಲೆ ಬಿಟ್ಟು ಸುಮಾರು ಹೊತ್ತು ಕಳೆದರೂ ಮನೆಗೆ ವಾಪಸಾಗಿಲ್ಲ ಎಂದು ಪೋಷಕರು ಶಾಲೆಗೆ ಬಂದಾಗ, ಮಕ್ಕಳನ್ನು ಕೋಣೆಯಲ್ಲಿ ಕೂಡಿಹಾಕಿದ್ದು ದೃಶ್ಯಗಳ ಕಂಡು ಬಂದಿದೆ. ಈ ವೇಳೆ ಶಾಲಾಡಳಿತ ಮಂಡಳಿಯ ನಡೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

Advertisements

ಪಾಲಕರು ಶಾಲಾ ಮುಖ್ಯಸ್ಥರ ಜೊತೆ ಮಾತುಕತೆಗೆ ಮುಂದಾದಾಗ ಶಾಲೆಯ ಶುಲ್ಕ ಕಟ್ಟಿಲ್ಲ , ನಿಮಗೆ ಶುಲ್ಕ ಕಟ್ಟಬೇಕು ಎಂದು ಮಾಹಿತಿ ತಿಳಿಸಿದ್ದೇವೆ. ಆದರೂ ನೀವು ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಕೂಡಿ ಹಾಕಲಾಗಿದೆ ಎಂದು ಶಾಲೆಯ ಮುಖ್ಯಸ್ಥರು ಮಾತನಾಡಿದ್ದು, ವಿಡಿಯೋ ವೈರಲ್ ಆಗಿದೆ.

“ಫೀಸ್ ಕಟ್ಟಿಲ್ಲ ಎಂಬ ಕಾರಣಕ್ಕೆ ಮಕ್ಕಳನ್ನು ಕೂಡಿ ಹಾಕಿರುವುದು ಸರಿಯಲ್ಲ. ಏನೇ ಇದ್ದರೂ ನಮ್ಮನ್ನು ಶಾಲೆಗೆ ಕರೆಸಿ, ತಿಳಿಸಬೇಕಿತ್ತು. ಈ ರೀತಿಯ ನಡೆ ಸರಿಯಲ್ಲ. ಇದು ತಪ್ಪು” ಎಂದು ಪೋಷಕರು ವಿರೋಧ ವ್ಯಕ್ತಪಡಿಸಿದಾಗ, ಮಕ್ಕಳನ್ನು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶಾಲಾ ಮುಖ್ಯಸ್ಥರ ಹಾಗೂ ವಿದ್ಯಾರ್ಥಿಗಳ ಪಾಲಕರ ಮಧ್ಯೆ ವಾದ-ವಿವಾದ ತಾರಕ್ಕೇರಿದಾಗ ಮಕ್ಕಳನ್ನು ಮನೆಗೆ ಬಿಡುಗಡೆಗೊಳಿಸಿದರು ಎಂದು ವಿದ್ಯಾರ್ಥಿಯ ಪೋಷಕರೊಬ್ಬರು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X