ಕೊಪ್ಪಳ | ಯುವ ಪೀಳಿಗೆಯು ರಂಗಭೂಮಿ ಪ್ರವೇಶಿಸಿ ಸಮೃದ್ಧ ಸಮಾಜ ಕಟ್ಟಬೇಕು: ರಂಗ ಶಿಕ್ಷಕ ಗುರುರಾಜ್

Date:

  • ಸರ್ಕಾರಿ ಶಾಲೆಯಲ್ಲಿ ವಿಶ್ವ ರಂಗಭೂಮಿ ದಿನದ ಆಚರಣೆ
  • ಸಂತಸ ಮತ್ತು ಸಡಗರದಿಂದ ಪಾಲ್ಗೊಂಡ ಶಾಲಾ ವಿದ್ಯಾರ್ಥಿಗಳು

ಯುವ ಪೀಳಿಗೆಯು ರಂಗಭೂಮಿ ಪ್ರವೇಶಿಸಬೇಕು. ಆ ಮೂಲಕ ಸಮೃದ್ಧ ಸಮಾಜ ಕಟ್ಟುವಂತಾಗಬೇಕು. ಯುವ ಸಮುದಾಯದ ಮುಂದಾಳತ್ವದಲ್ಲಿ ಈ ನಾಡನ್ನ ಕಟ್ಟಬೇಕಾದ ಅವಶ್ಯಕತೆ ಇದೆ” ಎಂದು ರಂಗ ಶಿಕ್ಷಕ ಗುರುರಾಜ್ ಸಲಹೆ ನೀಡಿದರು.

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜಹಗೀರ ಗುಡದೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಪದ್ಯ ರಂಗ ಪ್ರಸ್ತುತಿ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಂಗ ಶಿಕ್ಷಕ ಗುರುರಾಜ್ ಮಾತನಾಡಿದರು.

“ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ರಂಗಭೂಮಿಯ ಒಡನಾಟದಿಂದ ಜಗತ್ತಿಗೆ ಹೊಸ ಅರ್ಥ ನೀಡಬೇಕು. ವಿದ್ಯಾರ್ಥಿಗಳು ರಂಗ ಪ್ರವೇಶಿಕೆ ಮಾಡುವುದರಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಶೈಕ್ಷಣಿಕವಾಗಿ ತಮ್ಮನ್ನು ತಾವು ಕಟ್ಟಿಕೊಳ್ಳುವ ಹೊಸ ಭರವಸೆಗೆ ಸಿದ್ದರಾಗುವಂತಾಗುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಲೆಯ ವಿದ್ಯಾರ್ಥಿಗಳು ಸಂಭ್ರಮ ಮತ್ತು ಸಡಗರದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪದ್ಯಗಳ ವಾಚನ ಹಾಗೂ ಗಾಯನ ಮಾಡಿದರು. ಕಾರ್ಯಕ್ರಮದಲ್ಲಿ ‘ಈಜಿಪ್ಟ್ ರಂಗಕರ್ಮಿ ಸಮಿಹಾ ಆಯೌಬ್’ ನೀಡಿದ ರಂಗ ಸಂದೇಶವನ್ನು ಕನ್ನಡದಲ್ಲಿ ಶಿಕ್ಷಕಿ ಶ್ರೀಮತಿ ತನುಜಾ ಪೊಲೀಸ್ ವಾಚನ ಮಾಡಿದರು.

10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಪದ್ಯ ರಂಗ ಪ್ರಸ್ತುತಿ ಕಾರ್ಯಕ್ರಮದಲ್ಲಿ ಕೌರವೇಂದ್ರನ ಕೊಂದೆ ನೀನು, ಹಲಗಲಿ ಬೇಡರು, ಹಸುರು, ಹಕ್ಕಿಹಾರುತಿದೆ ನೋಡಿದಿರಾ, ಸಂಕಲ್ಪ ಗೀತೆ ಹಾಗೂ ವೀರಲವ ಪದ್ಯಗಳನ್ನು ಪ್ರಸ್ತುತಿ ಪಡಿಸಿದರು.

ಈ ಸುದ್ದಿ ಓದಿದ್ದೀರಾ? : ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾ ಸತ್ಯಪ್ಪ ಯಲಬುರ್ಗಿ ಮಾತನಾಡಿ, “ನಮ್ಮ ಶಾಲೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದೇವೆ. ರಂಗ ಶಿಕ್ಷಕರ ಇರುವಿಕೆಯಿಂದ ಮಕ್ಕಳಲ್ಲಿ ರಂಗ ಭಯ ದೂರಾಗಿದೆ” ಎಂದು ಅಭಿಪ್ರಾಯ ಪಟ್ಟರು.

“ಬಹುತೇಕ ವಿದ್ಯಾರ್ಥಿಗಳು ಆಸಕ್ತಿ, ಕೌಶಲ್ಯದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ. ರಂಗಭೂಮಿಯ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ತಮ್ಮ ಕಲೆ ಪ್ರದರ್ಶಿಸಿದ ಎಲ್ಲ ಮಕ್ಕಳಿಗೂ ಬಹುಮಾನ ವಿತರಿಸಿ, ಸ್ಥಳೀಯ ಅತಿಥಿ ಶಿಕ್ಷಕರಿಗೆ ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭೀಮರಾವ್ ಸಾಳಂಕಿ, ಶಿವಪ್ಪ ಇಲಾಳ, ಬಸಪ್ಪ ಹಿರೇಮನಿ, ಶರಣಪ್ಪ ರಾಂಪುರ್, ಸುಮಿತ್ರ ಭಂಡಾರಿ, ರಮೇಶ್ ಚವಾನ್, ಜಗದೀಶ್ ಬಾಸಿಂಗದ, ಅತಿಥಿ ಶಿಕ್ಷಕ ಶರಣಪ್ಪ ಗೋಡೆಕರ್, ಮಹಬೂಬ್ ಸಾಬ್ ಘೋರಿ, ರವಿಕುಮಾರ ರಾಜೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...