ಕೊಪ್ಪಳ | ವೈರಲ್ ಫೀವರ್: ಆಸ್ಪತ್ರೆಯಾಗಿ ಮಾರ್ಪಟ್ಟ ದೇವಾಲಯ

Date:

ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಹಲವಾರು ಜನರು ಜ್ವರಕ್ಕೆ ತುತ್ತಾಗಿದ್ದಾರೆ. ಗ್ರಾಮದ ದೇವಸ್ಥಾನವನ್ನು ಆಸ್ಪತ್ರೆಯ ವಾರ್ಡ್‌ಆಗಿ ಮಾರ್ಪಡಿಸಲಾಗಿದೆ. ಜ್ವರಕ್ಕೆ ತುತ್ತಾದ ಗ್ರಾಮಸ್ಥರಿಗೆ ದಾವಸ್ಥಾನದ ಆವರಣದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಕಿ ಗ್ರಾಮದಲ್ಲಿ ಒಂದು ತಿಂಗಳ ಹಿಂದೆಯೇ ಜ್ವರ ಪ್ರಕರಣಗಳು ವರದಿಯಾಗಲು ಆರಂಭಿಸಿದ್ದವು. ಆದರೆ, ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲಿಲ್ಲ ವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಈಗ, ಅಧಿಕಾರಿಗಳು ಗ್ರಾಮದ ಭೀಮಾಂಬಿಕಾ ದೇವಸ್ಥಾನದಲ್ಲಿಯೇ ತಾತ್ಕಾಲಿಕ ಆರೋಗ್ಯ ಶಿಬಿರ ತೆರೆದು ಚಿಕಿತ್ಸೆ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ದೇವಾಲಯವು ಈಗ ರೋಗಿಗಳು ಸತತವಾಗಿ ಮಲಗಿರುವ ವಾರ್ಡ್‌ ರೀತಿ ಕಾಣಿಸುತ್ತಿದೆ. ರೋಗಿಗಳಿಗೆ ಐವಿ ದ್ರವ ನೀಡಲಾಗುತ್ತಿದೆ. ಇದು ವೈರಲ್ ಜ್ವರದ ವಿರುದ್ಧ ಹೋರಾಡುತ್ತದೆ. ರೋಗಿಗಳ ಕುಟುಂಬಗಳು ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಿಬ್ಬಂದಿಗಳು ಹೇಳಿದ್ದಾರೆ.

ನೆರೆಬೆಂಚಿ ಗ್ರಾಮದಲ್ಲಿ ಒಟ್ಟು 1,200 ಜನಸಂಖ್ಯೆ ಇದ್ದು, ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲ. ಸ್ವಚ್ಚತೆಯೂ ಸರಿಯಾಗಿಲ್ಲ. ಸುತ್ತಮುತ್ತಲಿನ ನೀರು ನಿಂತಲ್ಲೇ ನಿಲ್ಲುವುದರಿಂದ ಸೊಳ್ಳೆಗಳ ಕಾಟ ಹೆಚ್ಚಿದೆ ಎಂದು ಗ್ರಾಮಸ್ಥರು ದೂರುತ್ತಾರೆ.

ಆರೋಗ್ಯ ಅಧಿಕಾರಿಗಳು ಕೊಪ್ಪಳಕ್ಕೆ ಕೆಲವು ರಕ್ತದ ಮಾದರಿಗಳನ್ನು ಕಳುಹಿಸಿದ್ದಾರೆ. ಗುರುವಾರ ಒಂದು ಚಿಕೂನ್‌ಗುನ್ಯಾ ಪ್ರಕರಣ ವರದಿಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಆರೋಗ್ಯಾಧಿಕಾರಿಗಳು ಗ್ರಾಮಸ್ಥರಿಗೆ ಆತ್ಮವಿಶ್ವಾಸ ತುಂಬುತ್ತಿದ್ದರೂ, ಯೋಗದಿಂದ ಜೀವ ಕಳೆದುಕೊಳ್ಳಬಹುದೆಂಬ ಆತಂಕ ಗ್ರಾಮಸ್ಥರಲ್ಲಿ ಹೆಚ್ಚಾಗಿದೆ. ಇಡೀ ಗ್ರಾಮವೇ ಕ್ವಾರಂಟೈನ್‌ನಲ್ಲಿದ್ದು, ಗ್ರಾಮಸ್ಥರು ಪರಸ್ಪರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಗುರುವಾರ ಕುಷ್ಟಗಿ ತಹಶೀಲ್ದಾರ್ ರವಿ ಅಂಗಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ. ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆರೋಗ್ಯ ಸಿಬ್ಬಂದಿಗೆ ತಿಳಿಸಿದ್ದಾರೆ.

ಕೊಪ್ಪಳ ಡಿಎಚ್‌ಒ ಲಿಂಗರಾಜ್ ಟಿ ಮಾತನಾಡಿ, “ನಾವು ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದೇವೆ. ತಾಲೂಕು ಆರೋಗ್ಯ ಅಧಿಕಾರಿಗಳು ಗ್ರಾಮದಲ್ಲಿದ್ದಾರೆ. ಶೀಘ್ರದಲ್ಲೇ ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...