ಕೊಪ್ಪಳ | ಕುಷ್ಟಗಿ ತಾಲೂಕನ್ನು ಗಂಗಾವತಿ ಕಂದಾಯ ಇಲಾಖೆಗೆ ಸೇರಿಸಿದ್ದನ್ನು ಹಿಂಪಡೆಯಿರಿ : ರೈತ ಸಂಘ ಒತ್ತಾಯ

Date:

Advertisements

ಗಂಗಾವತಿ ತಾಲೂಕಿನ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳ ಸಹಾಯಕ ಆಯುಕ್ತ ಕಛೇರಿಗೆ ಕುಷ್ಟಗಿ ತಾಲೂಕನ್ನು ಸೇರ್ಪಡಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಕೊಪ್ಪಳ ಜಿಲ್ಲಾ ರಾಜ್ಯ ರೈತ ಸಂಘದ ಮುಖಂಡ ನಜೀರ್ ಸಾಬ್ ಮೂಲಿಮನಿ ಒತ್ತಾಯಿಸಿದರು.

ಗಂಗಾವತಿ ನಗರದ ಉಪ ವಿಭಾಗ ಕಚೇರಿ ಸರ್ಕಾರ ಅನುಮತಿಸಿದ್ದು, ಶೀಘ್ರವೇ ಗಂಗಾವತಿಯಲ್ಲಿ ಕಚೇರಿ ಅಸ್ತಿತ್ವಕ್ಕೆ ಬರಲಿದೆ. ಗಂಗಾವತಿ ತಾಲೂಕು ಸೇರಿ ಕನಕಗಿರಿ, ಕಾರಟಗಿ ,ತಾಲ್ಲೂಕಿನ ರೈತರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿದೆ ಎಂದರು.

ಈಗಾಗಲೇ ಗಂಗಾವತಿ ನಗರದಲ್ಲಿರುವ ಡಿವೈಎಸ್‌ಪಿ ಹಾಗೂ ಕರ್ನಾಟಕ ವಿದ್ಯುತ್ ಸರಬರಾಜ ವಿಭಾಗ ಕಚೇರಿಗಳಿಗೆ ಕುಷ್ಟಗಿ ತಾಲೂಕು ಸೇರ್ಪಡೆಗೊಂಡು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕುಷ್ಟಗಿ ತಾಲೂಕಿನಿಂದ ಗಂಗಾವತಿ ನಗರಕ್ಕೆ ಸುಮಾರು 70 ಕಿಲೋ ಮೀಟರ್ ಅಂತರವಿದೆ. ಸರಿಯಾದ ಸಮಯಕ್ಕೆ ಬಸ್ ಇಲ್ಲದೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಿ ಸುಸ್ತಾಗುವ ಸಾಧ್ಯತೆ ಹಾಗೂ ಸಾರ್ವಜನಿಕರು ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆಗಳಿರುತ್ತವೆ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕುಷ್ಟಗಿ ತಾಲೂಕನ್ನು ಮೊದಲಿನಂತೆ ಕೊಪ್ಪಳದ ಉಪ ವಿಭಾಗ ಕಛೇರಿಯ ವ್ಯಾಪ್ತಿಯಲ್ಲಿ ಮುಂದುವರೆಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ತಕ್ಷಣ ಕೊಪ್ಪಳ ತಾಲೂಕಿಗೆ ಸೇರಿಸಬೇಕು. ಇಲ್ಲದಿದ್ದರೆ ಇದನ್ನು ಆಗ್ರಹಿಸಿ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ನಜೀರ್ ಸಾಬ್ ಮೂಲಿಮನಿ ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X