ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ.
ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದರಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
2024ರಲ್ಲಿ ನಡೆದ 300ಕ್ಕೂ ಹೆಚ್ಚು ಕಾಮಗಾರಿಗಳಲ್ಲಿ ಸುಮಾರು ₹10 ಕೋಟಿಗೂ ಹೆಚ್ಚು ಭ್ರಷ್ಟಾಚಾರವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಈ ನಡುವೆ ಲೋಕಾಯುಕ್ತಕ್ಕೂ ಈ ಬಗ್ಗೆ ದೂರು ದಾಖಲಾಗಿತ್ತು.
ನಗರಸಭೆಯ ಜೆ.ಇ. ಸೋಮಲಿಂಗಪ್ಪ ಮನೆಯಿರುವ ಇಲ್ಲಿನ ಶಿವಗಂಗಾ ನಗರ, ಆರ್.ಐ. ಉಜ್ವಲ್ ಹಾಗೂ ಪ್ರವೀಣ್ ಕಂದಾರಿ ಸೇರಿದಂತೆ ವಿವಿಧೆಡೆ ತಪಾಸಣೆಯಲ್ಲಿ ತೊಡಗಿವೆ. ಲೋಕಾಯುಕ್ತ ಅಧಿಕಾರಿಗಳ ಒಂದು ತಂಡ ನಗರಸಭೆ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.