ಕೊಪ್ಪಳ | ಸಂಗನಾಳದ ದಲಿತ ಯುವಕನಿಗೆ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆಗೆ ವಿಧಿಸಬೇಕು

Date:

Advertisements

ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಯುವಕ ಯಮನೂರಪ್ಪ ಈರಪ್ಪ ಬಂಡಿಹಾಳ ಇವರ ಕ್ಷೌರ ನಿರಾಕರಿಸಿ ಕೊಲೆ ವಿರೋಧಿಸಿ ಮತ್ತು ಬಿಹಾರದ 14 ವರ್ಷದ ದಲಿತ ಬಾಲಕಿ ಅಪಹರಣ ಬರ್ಬರ ಹತ್ಯೆ ಮಾಡಿದ ಹಾಗೂ ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಹತ್ಯೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರಿಗೆ ಮನವಿ ಸಲ್ಲಿಸಿದರು .

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಶನಿವಾರ ದಲಿತ ಯುವಕ ಯಮನೂರಪ್ಪ ಈರಪ್ಪ ಬಂಡಿಹಾಳ ಇವರನ್ನು ಮುದುಕಪ್ಪ ಹಡಪದ ಎಂಬ ವ್ಯಕ್ತಿಯ ಸಲೋನಗೆ ಹೋಗಿ ಕ್ಷೌರ ಮಾಡಿಸಲು ಹೋದಾಗ ಇಬ್ಬರ ಮಧ್ಯೆ ಸಂಘರ್ಷ ನಡೆದು ಕ್ಷೌರ ಮಾಡುವ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಅತ್ಯಂತ ನೋವಿನ ವಿಷಯವಾಗಿದೆ. ಈ ಘಟನೆಯನ್ನು ಸೂಕ್ತವಾಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು .

ಸಂಗನ ಹಾಲ ಗ್ರಾಮದಲ್ಲಿ ಜಾತಿ ಸಂಘರ್ಷಕ್ಕೆ ಎಡೆ ಮಾಡದೆ ಜನಗಳ ಸಾಮರಸ್ಯ ಹಾಳಾಗದಂತೆ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಜಾತಿ ಬಣ್ಣ ಬಳಿಯದೇ ನಿಷ್ಪಕ್ಷಪಾತ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು .

Advertisements

ಇಬ್ಬರ ನಡುವೆ ನಡೆದ ಜಗಳ ಕೊಲೆ ಮಾಡುವಷ್ಟು ಹೀನಾಯ ಸ್ಥಿತಿಗೆ ತಲುಪಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಹಾಗಾಗಿ ಜಾತಿ ಹೆಸರಲ್ಲಿ ಕೊಲೆಯಾಗಿರುವ ವಿಷಯವನ್ನು ರಾಜಕೀಯವಾಗಿ ಬೆಳೆಸಿದರೆ ಸರಿಯಾದ ಕ್ರಮವಲ್ಲ ಎಂದರು .

ಸ್ವಾತಂತ್ರ್ಯ ದಿನಾಚರಣೆಯ ದಿನವೆ ಬಿಹಾರದಲ್ಲಿ 14 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೇಸಗಿ ಅತ್ಯಂತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾರತದ ದಲಿತರ ಬದುಕಿನ ಪರಿಸ್ಥಿತಿ ದುಸ್ಥಿತಿಯಾಗಿದೆ. ಹಾಗೂ ಕೋಲ್ಕತ್ತದ ವೈದ್ಯೆ ವಿದ್ಯಾರ್ಥಿನಿ ಹತ್ಯೆ ಕೂಡಾ ನಡೆದಿದೆ ಇಂತಹ ಅತ್ಯಾಚಾರ ಕೊಲೆ , ಜಾತಿ ನಿಂದನೆ , ಜಾತಿ ಕೊಲೆಯಂತಹ ಘಟನೆಗಳು ದೇಶದ ಅನೇಕ ರಾಜ್ಯಗಳಲ್ಲಿ ನಡೆಯುತ್ತಲೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು .

ಸದ್ಯ ದೇಶದಲ್ಲಿ ದುಡಿಯುವ ವರ್ಗದ ಮಹಿಳೆಯರಿಗೆ ದಲಿತರಿಗೆ ವಿದ್ಯಾರ್ಥಿ ಯುವ ಜನ ಮಹಿಳೆಯರಿಗೆ ಭದ್ರತೆ ಇಲ್ಲಾದಂತಾಗಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಕಳೆದರೂ ಇನ್ನೂ ದೇಶದಲ್ಲಿ ಬ್ರಿಟಿಷ್ ಆಡಳಿತನೆ ನಡೆಯುತ್ತಿದೆ . ಇನ್ನೂ ಯಾವಾಗ ಮಹಿಳೆಯರಿಗೆ ದಲಿತರಿಗೆ ಸ್ವಾತಂತ್ರ್ಯ ಸಿಗೋದು ಎಂದು ಪ್ರಶ್ನಿಸಿದರು .ಸರಕಾರ ಕೊಲೆ , ಹತ್ಯೆ , ಜಾತಿ ನಿಂದನೆ ಮಾಡುತ್ತಿರುವ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಮುಂದಾಗುತ್ತಿಲ್ಲ ಎಂದು ಕಾಣುತ್ತಿದೆ ಎಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕರು ಅಲ್ಲಮ ಪ್ರಭು ಬೆಟ್ಟದೂರು , ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಎಐಟಿಯುಸಿ) ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ್ ಶೀಲವಂತರ್ , ಕರ್ನಾಟಕ ರೈತ ಸಂಘ (AIKKS) ಜಿಲ್ಲಾ ಅಧ್ಯಕ್ಷ
ಬಸವರಾಜ್ ಪೂಜಾರ ನರೇಗಲ್ , ತುಕಾರಮ್ ಬಿ.ಪಾತ್ರೋಟಿ , ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ , ಜಿಲ್ಲಾಧ್ಯಕ್ಷ ಖಾಸೀಮ ಸರ್ದಾರ್ , ಎಐಯುಟಿಯುಸಿ
ಜಿಲ್ಲಾ ಮುಖಂಡ ಶರಣು ಗಡ್ಡಿ , ಜಾಫರ್ ಕುರಿ , ನಾಗರಾಜ್ ಯಾದವ್ , ಪಾಮಣ್ಣ ಇನ್ನಿತರರು ಹಾಜರಿದ್ದರು .

mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರೀತಿ ವಿಚಾರಕ್ಕೆ ಗವಿಸಿದ್ದಪ್ಪ ಹತ್ಯೆ ಪ್ರಕರಣ; ವಿಷದ ಬಾಟಲಿ ಮುಂದಿಟ್ಟುಕೊಂಡು ಬಾಲಕಿ ತಾಯಿ ಪ್ರತಿಭಟನೆ

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ನಡೆದ ಗವಿಸಿದ್ದಪ್ಪನ ಭೀಕರ ಹತ್ಯೆ ಪ್ರಕರಣವು ಇದೀಗ...

ಕೊಪ್ಪಳ | ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ: ವೀರೇಶ್ ಇಳಗನೂರು

ಜಸ್ಟೀಸ್ ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಕೆಲವು ನ್ಯೂನ್ಯತೆ ಇರುವುದು ಕಂಡು ಬರುತ್ತಿದ್ದು,...

ಕೊಪ್ಪಳ | ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದ ವಿಶೇಷ ಅತಿಥಿಯಾಗಿ ಗ್ರಾಪಂ ಅಧ್ಯಕ್ಷೆ ಫರೀದಾ ಬೇಗಂ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ...

ಕೊಪ್ಪಳ | ಗವಿಸಿದ್ದಪ್ಪ ನಾಯಕನ ಕೊಲೆಗೆ ಖಂಡನೆ: ಅಂಗಡಿ ಮುಂಗಟ್ಟು, ಖಾಸಗಿ ಶಾಲೆಗಳು ಬಂದ್‌

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ನಡೆದ ಗವಿಸಿದ್ದಪ್ಪ...

Download Eedina App Android / iOS

X