ಉಡುಪಿ | ಕೊರಗ ಸಂಘಗಳ ಒಕ್ಕೂಟದಿಂದ ಕಂದಾಯ ಸಚಿವರಿಗೆ ಮನವಿ

Date:

Advertisements

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ – ಕೇರಳದ ನಿಯೋಗವು ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು.

ಸಮುದಾಯದ ಪ್ರಮುಖ ಬೇಡಿಕೆಗಳಾದ ಸಮುದಾಯದ 800 ದರ್ಕಾಸು ಅರ್ಜಿ ಸಲ್ಲಿಸಿದ್ದು ಕೂಡಲೇ ಭೂಮಿ ಗುರುತಿಸಿ ಭೂಮಿ ಹಕ್ಕುಪತ್ರ ನೀಡುವುದು, ಹಿರಿಯರ ಹೆಸರಿನಲ್ಲಿರುವ ಜಮೀನಿನ ಖಾತೆ ಬದಲಾವಣೆ ವಿಶೇಷ ಆಂದೋಲನ ನಡೆಸಿ ಖಾತೆ ಬದಲಾವಣೆಗೆ ಅಧಿಕಾರಿಗಳಿಗೆ ಸೂಚಿಸಬೇಕು, ಜಮೀನು ಹೊಂದಿದ ಹಕ್ಕುದಾರರ ಗಡಿಗುರುತು ನಕ್ಷೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕಿಗೆ ವಿಶೇಷ ಸರ್ವೇಯವರು ನೇಮಕ ಮಾಡಬೇಕು.

ಕೊರಗರ ಭೂಮಿ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳಿಗೆ ನೇಮಕ ಮಾಡಬೇಕು. ಗೇರು ಕೃಷಿ ಅಭಿವೃದ್ಧಿ ನಿಗಮ ಹಾಗೂ ಅರಣ್ಯ ಇಲಾಖೆ ವಾಸದಲ್ಲಿರುವ ಡಿಸಿ ಮನ್ನಾ ಭೂಮಿಯಲ್ಲಿ ಕೊರಗರಿಗೆ ಹಂಚಲು ಕ್ರಮ ವಹಿಸಬೇಕು. ಡಾ. ಮಹಮ್ಮದ್ ಪೀರ್ ವರದಿಯಂತೆ ಕೊರಗ ಸಮುದಾಯದ ಪ್ರತಿಯೊಂದು ಕುಟುಂಬಕ್ಕೂ ಕನಿಷ್ಠ 1 ಎಕ್ರೆ ಕೃಷಿ ಭೂಮಿ ಒದಗಿಸಬೇಕು. ಕೊರಗ ಸಮುದಾಯದ ಅಧ್ಯಯನ ಕೇಂದ್ರ ಸ್ಥಾಪನೆಗೆ 100 ಎಕ್ರೆ ಭೂಮಿ ಕಾದಿರಿಸಬೇಕು. ಮತ್ತು ಈಗಾಗಲೇ ಕೊರಗರಿಗೆ ಹಕ್ಕುಪತ್ರ ನೀಡಲು ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಪರಿಗಣಿಸಿ ಹಕ್ಕುಪತ್ರ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಲಾಯಿತು.

Advertisements

ನಿಯೋಗದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ, ಸಂಯೋಜಕರಾದ ಪುತ್ರನ್ ಹೆಬ್ರಿ, ಕೊಕ್ಕರ್ಣೆ ಸಂಘದ ಸದಸ್ಯರಾದ ಶೇಖರ ಕೆಂಜೂರು, ಸುಪ್ರಿಯಾ ಎಸ್ ಕಿನ್ನಿಗೋಳಿ, ನರಸಿಂಹ ಪೆರ್ಡೂರು, ಶುಭ, ಶೋಭಾ, ವಸಂತ, ಮುದ್ದು, ಸುನಂದಾ ಮತ್ತು ಚಂದ್ರವತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X