ಉಡುಪಿ | ಕೊರಗ ಸಮುದಾಯದ ಅಹೋರಾತ್ರಿ ಧರಣಿಗೆ ಎಸ್‌ಐಓ ಬೆಂಬಲ

Date:

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕೆಂಬ ನ್ಯಾಯಸಮ್ಮತ ಹಾಗೂ ದೀರ್ಘಕಾಲದ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 24ನೇ ದಿನಕ್ಕೆ ಕಲಿಟ್ಟಿದ್ದು ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.

- Advertisement -

ಈ ಹೋರಾಟದ ಭಾಗವಾಗಿ, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ವಿದ್ಯಾರ್ಥಿ ಸಂಘಟನೆಯ ಉಡುಪಿ ಜಿಲ್ಲಾ ತಂಡ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಗಾರರ ಸಮಸ್ಯೆಗಳು, ಅನುಭವಿಸುತ್ತಿರುವ ಸಾಮಾಜಿಕ-ಆರ್ಥಿಕ ಅನ್ಯಾಯಗಳು ಹಾಗೂ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಗಮನದಿಂದ ಆಲಿಸಿತು. ಕೊರಗ ಸಮುದಾಯವು ಶಿಕ್ಷಣ ಪಡೆದರೂ ಸಹ ಸರ್ಕಾರಿ ಉದ್ಯೋಗಗಳಲ್ಲಿ ಅವಕಾಶಗಳಿಂದ ವಂಚಿತರಾಗುತ್ತಿರುವುದು ಗಂಭೀರ ವಿಚಾರವಾಗಿದ್ದು, ಇದಕ್ಕೆ ತಕ್ಷಣದ ಪರಿಹಾರ ಅಗತ್ಯವಿದೆ ಎಂದು ಎಸ್‌ಐಓ ಅಭಿಪ್ರಾಯ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈದಿನ.ಕಾಮ್ ಜೊತೆ ಮಾತನಾಡಿದ ಎಸ್‌ಐಓ ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಕೊರಗ ಸಮುದಾಯದ ಬೇಡಿಕೆಗಳು ಸಂಪೂರ್ಣವಾಗಿ ನ್ಯಾಯಸಮ್ಮತವಾಗಿದ್ದು, ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿ ಹಾಗೂ ಯುವ ಸಂಘಟನೆಗಳು ಇಂತಹ ಹೋರಾಟಗಳಿಗೆ ಸದಾ ಬೆಂಬಲವಾಗಿ ನಿಲ್ಲಬೇಕಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ, ಎಸ್‌ಐಓ ಕಾರ್ಯಕರ್ತರಾದ ಅಫ್ಷಾನ್ ನವಾಜ್, ಮುಝಯಿನ್, ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...