ಕೊರಟಗೆರೆ | ಅತ್ತೆಯ ಡೆತ್ ಸೆಂಟೆನ್ಸ್ ಬರೆದ ಡೆಂಟಲ್ ಡಾಕ್ಟರ್ ಈಗ ಪೊಲೀಸರ ಅತಿಥಿ

Date:

Advertisements

ಕೊರಟಗೆರೆ  ತಾಲೂಕಿನ  ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆ ತನಕ ಸುಮಾರು 30 ಕಿ.ಮೀ. ದೂರ ವ್ಯಾಪ್ತಿಯಲ್ಲಿ 17 ಸ್ಥಳಗಳಲ್ಲಿ ಮಹಿಳೆಯ ದೇಹದ ತುಂಡುಗಳನ್ನು ಎಸೆದಿರುವ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೃತ ಮಹಿಳೆ ಬೆಳ್ಳಾವಿ ಮೂಲದ ಲಕ್ಷ್ಮಿದೇವಮ್ಮ (42) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಅಳಿಯ, ವೃತ್ತಿಯಲ್ಲಿ ದಂತ ವೈದ್ಯನಾಗಿರುವ ರಾಮಚಂದ್ರಯ್ಯ ಮತ್ತು ಸತೀಶ್, ಕಿರಣ್ ಎಂಬವರು ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿದ್ದಾರೆ.

ತುಮಕೂರು ನಗರದಲ್ಲಿ ದಂತ ಕ್ಲಿನಿಕ್ ಇಟ್ಟು ಕೊಂಡಿದ್ದ ಆರೋಪಿ ಡಾ‌. ರಾಮಚಂದ್ರಯ್ಯ ಕುವೆಂಪು ನಗರದಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದ್ದು, ಅತ್ತೆಯ ಚಟುವಟಿಕೆಗಳ ಬಗ್ಗೆ ಬೇಸತ್ತ ಅಳಿಯ ಅಸಮಾದಾನಗೊಂಡು ಈ ದುಷ್ಕೃತ್ಯ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದ್ದು, ತನ್ನ ಸ್ನೇಹಿತರ ಜೊತೆಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ, ಸದ್ಯ ಕೊರಟಗೆರೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisements

ಮೊದಲ ಹೆಂಡತಿಯು ವಿಚ್ಚೇದನ ಪಡೆಯುವ ಹಂತದಲ್ಲಿದಾಗ 2ನೇ ಮದುವೆಯಾಗಿದ್ದ ಡಾಕ್ಟರ್, 2ನೇ ಹೆಂಡತಿಯ ತಾಯಿಯನ್ನೇ  ಮರ್ಡರ್ ಮಾಡಿದ್ದಾನೆ. ಈ ಕೃತ್ಯಕ್ಕೆ ಬಳಸಲಾಗಿದ್ದ ಕಾರ್ ನಿಂದಲ್ಲೇ ಪತ್ತೆಯಾದರೂ ಆರೋಪಿಗಳು, ಸ್ನೇಹಿತ ಸತೀಶ್ ನ ಕಾರ್ ನಲ್ಲಿಯೇ ಅತ್ತೆಯ ತುಂಡು ತುಂಡಾದ ಶರೀರದ ಭಾಗಗಳನ್ನು ದಿಕ್ಕಾಪಾಲು ಮಾಡಿ ಎಸೆದಿದ್ದ ಆರೋಪಿ ಡಾ. ರಾಮಚಂದ್ರಯ್ಯನನ್ನು ಬಂಧಿಸಲಾಗಿದೆ.

ಮೂರು ದಿನಗಳ ಕಾಲ ಮೃತದೇಹವನ್ನು ತಮ್ಮ ಬಳಿಯೇ ಇಟ್ಟುಕೊಂಡು ಆ.6ರಂದು ದೇಹವನ್ನು ತುಂಡು ಮಾಡಿ ಎಸೆದಿದ್ದರು. ಬಳಿಕ ರಾಮಚಂದ್ರ ಧರ್ಮಸ್ಥಳಕ್ಕೆ ತೆರಳಿದ್ದ. ಆತನ ಮೇಲೆ ಅನುಮಾನಗೊಂಡು ಪೊಲೀಸರು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X