ಕೊರಟಗೆರೆ | ಕೆರೆಯಾಗಹಳ್ಳಿ ಸೇತುವೆ ಕಾಮಗಾರಿ : ಸಂಚಾರಕ್ಕೆ ಅಡ್ಡಿ ; ಪರ್ಯಾಯ ರಸ್ತೆ ದುರಸ್ತಿಗೆ ಆಗ್ರಹ

Date:

Advertisements

ಗೊರವನಹಳ್ಳಿ ರಸ್ತೆಗೆ ಸೇತುವೆ ನಿರ್ಮಿಸಲು ಕಾಮಗಾರಿ ಪ್ರಗತಿಯಲ್ಲಿದ್ದು, ಪರ್ಯಾಯವಾಗಿ ನಿರ್ಮಿಸಿದ್ದ ರಸ್ತೆಯೂ ಗುಂಡಿಗಳಿಂದ ಹದಗೆಟ್ಟಿದ್ದು, ಕಲ್ಲು ತುಂಬಿದ ಟ್ರಾಕ್ಟರ್ ಸಿಲುಕಿ ವಾಹನಗಳ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿರುವ ಘಟನೆ ಮಂಗಳವಾರ ಜರುಗಿದೆ.

ಕೊರಟಗೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ಗೊರವನಹಳ್ಳಿ ರಸ್ತೆಯ ಮಾರ್ಗದ ಕೆರೆಯಾಗಹಳ್ಳಿ ಗ್ರಾಮ ಸಮೀಪ ನಿರ್ಮಿಸುತ್ತಿರುವ ಸೇತುವೆಯ ಪಕ್ಕದಲ್ಲಿಯೇ ಪರ್ಯಾಯ ಮಣ್ಣಿನ ರಸ್ತೆಯಲ್ಲಿಯೇ ಟ್ರಾಕ್ಟರ್ ಸಿಲುಕಿ ವಾಹನ ಸಂಚರಿಸಲು ಹರಸಾಹಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

1001808577

ಸುಮಾರು ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಮಳೆಗಾಲದ ಸಂಧರ್ಭದಲ್ಲಿ ಕಾಮಗಾರಿ ಶುರು ಮಾಡಿರುವುದು ಪ್ರತಿದಿನ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಈ ಭಾಗದ ಜನರು ಕೊರಟಗೆರೆ ಹಾಗೂ ಬೆಂಗಳೂರು, ತುಮಕೂರು ಸೇರಿದಂತೆ ನಗರ ಪ್ರದೇಶಗಳಿಗೆ ಉದ್ಯೋಗ ಹರಸಿ ಆಟೋ, ತಮ್ಮ ದ್ವೀಚಕ್ರವಾಹನಗಳ ಮೂಲಕ ಪ್ರಯಾಣ ಬೆಳೆಸುವ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಗ್ರಾಮಸ್ಥರ ಅಭಿಪ್ರಾಯವಾಗಿದೆ

1001808576

ಕೊರಟಗೆರೆ-ಗೊರವನಹಳ್ಳಿಗೆ ಪ್ರತಿದಿನ ಸರ್ಕಾರಿ ಸಾರಿಗೆ ಬಸ್ಸು ಸಂಚರಿಸುವ ರಸ್ತೆಯೇ ಈ ರೀತಿ ಟ್ರಾಕ್ಟರ್ ಸಿಲುಕಿಕೊಂಡು ಕೆಲ ಕಾಲ ಬಸ್ಸು ನಿಂತು ಸಮಸ್ಯೆ ಬಗೆಹರಿಸಲು ಸಾಧ್ಯವಾಗದೇ ಬಸ್ಸು ಹಿಂತುರಿಗಿ ಬೇರೊಂದು ರಸ್ತೆ ಮಾರ್ಗವಾಗಿ ಸಂಚರಿಸಿ ಕೊರಟಗೆರೆ ತಲುಪವಂತಹ ವಾತಾವರಣ ನಿರ್ಮಾಣವಾಗಿದ್ದು, ಬೆಂಗಳೂರಿನಂತಹ ನಗರಗಳಿಂದ ಆಗಮಿಸುವ ಭಕ್ತಾದಸಿಗಳಿಗೂ ಈ ಸಮಸ್ಯೆಯೂ ಕಾಡಿದ್ದು ಕಂಡು ಬಂದಿದ್ದ, ಇಂತಹ ರಸ್ತೆ ಕಾಮಗಾರಿಗಳನ್ನು ಮಾಡುತ್ತಿರುವ ಸಂಬಂಧಪಟ್ಟ ಇಲಾಖೆ ಹಾಗೂ ಕಂಟ್ರಾಕ್ಟರ್ ಸೂಕ್ತ ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಂಡುವಂತೆ ಗೊರವನಹಳ್ಳಿ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ಮಾತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X