ಉಡುಪಿ | 1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ, ಶಿಕ್ಷಣ ಸಚಿವ ಘೋಷಣೆ

Date:

Advertisements

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಈ ಹಿಂದೆ, ಮಕ್ಕಳು 1ನೇ ತರಗತಿಗೆ ದಾಖಲಾಗಲು ಕಡ್ಡಾಯವಾಗಿ 6 ವರ್ಷದ ವಯೋಮಿತಿಯನ್ನು ಪೂರೈಸಿರಬೇಕಿತ್ತು. ಇದರಿಂದ ಅಂಗನವಾಡಿ, ಎಲ್ ಕೆಜಿ, ಯುಕೆಜಿಗಳಲ್ಲಿ ಜೊತೆಗೆ ಇದ್ದು ತನ್ನ ಸಹಪಾಠಿ ಮಗು ಒಂದನೇ ತರಗತಿಗೆ ತೇರ್ಗಡೆ ಆಗುವಾಗ ಪ್ರಾಯದಲ್ಲಿ ಬರಿ 10, 20 ದಿನಗಳ ಅಂತರವಿರುವ ಮಗು ಮುಂದಿನ ಹಂತಕ್ಕೆ ತೇರ್ಗಡೆಯ ಅವಕಾಶ ಇಲ್ಲ ಅಂದಾಗ ಮಗುವಿನ ಮಾನಸಿಕ ಸ್ಥಿತಿ ಮತ್ತು ವಿದ್ಯಾಭ್ಯಾಸದಲ್ಲಿ ವ್ಯತ್ಯಾಸ ಆಗಬಹುದು.

ಆದ್ದರಿಂದ 2025 ನೇ ಸಾಲಿನಲ್ಲಿ ಶಾಲೆಗಳು ಶೀಘ್ರದಲ್ಲಿ ಪುನಃ ಆರಂಭವಾಗಲಿದ್ದು ಸರ್ಕಾರ ಕೂಡಲೇ ಜೂನ್ ತಿಂಗಳಲ್ಲಿ ಹುಟ್ಟಿದ ಮಗುವಿಗೆ ಯುಕೆಜಿ ಯಿಂದ 1ನೇ ತರಗತಿಗೆ ಮುನ್ನಡೆಯಲು ಸರಕಾರ ರಿಯಾಯಿತಿ ಕೊಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಇವರು ಇಲಾಖಾ ಸಂಬಂಧಿತರಿಗೆ ಸಾಕಷ್ಟು ಮನವಿ ಮಾಡಿದ್ದರು.

Advertisements

ಇಂದು ಆ ಮನವಿಗೆ ಫಲಶೃತಿಯಾಗಿ ಶಿಕ್ಷಣ ಸಚಿವರು ಇದೀಗ ವಯೋಮಿತಿಯ ಮಾನದಂಡವನ್ನು ಸಡಿಲಿಸಿದ್ದಾರೆ.
5 ವರ್ಷ 5 ತಿಂಗಳು ವಯೋಮಾನವನ್ನು ಪೂರೈಸಿದ್ದ ಮಕ್ಕಳು 1ನೇ ತರಗತಿಗೆ ದಾಖಲಾಗಬಹುದಾಗಿದೆ. ಆದಾಗ್ಯೂ ಸಂಪೂರ್ಣ ಆರು ವರ್ಷ ಪೂರೈಸಿರದ ಮಕ್ಕಳು 1ನೇ ತರಗತಿಗೆ ದಾಖಲಾಗಲು ಅವರು ಯುಕೆಜಿ ಕಲಿತಿರಬೇಕು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

“ಎಲ್‌ಕೆಜಿ, ಯುಕೆಜಿಯಲ್ಲಿ ಕಲಿತಿದ್ದರೆ ಮಾತ್ರವೇ 5 ವರ್ಷ 5 ತಿಂಗಳು ಆಸುಪಾಸಿನ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಈ ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ವಯೋಮಿತಿ ಸಡಿಲಿಕೆಯು ಈ ವರ್ಷಕ್ಕೆ ಮಾತ್ರವೇ ಅನ್ವಯವಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X