ಚುನಾವಣೆ ನೆಪದಲ್ಲಿ ಗಿಮಿಕ್ ಮಾಡಲು ಹೊರಟಿದ್ದಾರೆ: ವರ್ತೂರ್‌ ಪ್ರಕಾಶ್‌ ವಿರುದ್ಧ ಕೊತ್ತೂರು ಮಂಜುನಾಥ್ ವಾಗ್ದಾಳಿ

Date:

Advertisements

ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್ ಶಾಸಕ ಹಾಗೂ ಸಚಿವರಾಗಿದ್ದರು. ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು. ಅಧಿಕಾರದಲ್ಲಿದ್ದಾಗ ಸುಮ್ಮನೆ ಇದ್ದು ಇಂದು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ. ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ವರ್ತೂರ್‌ ಪ್ರಕಾಶ್‌ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ ನಡೆಸಿದರು.

ಕೋಲಾರ ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು” ಎಂದರು.

“ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಯನ್ನೂ ಅಭಿವೃದ್ಧಿ ಮಾಡಲಾಗುತ್ತದೆ. ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ನಮಗೆ ಅಭಿವೃದ್ಧಿ ಮುಖ್ಯವಾಗಿದೆ. ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ” ಎಂದು ಮನವಿ ಮಾಡಿದರು.

Advertisements

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, “ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಇಂದು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ. ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬೇಡಿ. ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು. ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಕೋಲಾರ | ರಾಜ್ಯ ಸರ್ಕಾರ ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು; ದಸಂಸ ಆಗ್ರಹ

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X