ಕೊಟ್ಟೂರು | ರೈತರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಆಗ್ರಹ

Date:

Advertisements

ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಭರ್ಮಣ್ಣ ಅವರು ವಿಜಯನಗರ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಕೊಟ್ಟೂರು ತಾಲೂಕಿನ ರೈತರ ಸಹಯೋಗದೊಂದಿಗೆ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ನೀಡಿ, ಮಾತನಾಡಿದ ಅವರು, “ಖರೀದಿ ಕೇಂದ್ರ ತೆರೆಯಬೇಕು, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿರುವ ಈರುಳ್ಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನಿಗದಿಮಾಡಬೇಕು” ಎಂದು ರೈತ ಮುಖಂಡ ಭರ್ಮಣ್ಣ ಒತ್ತಾಯಿಸಿದರು.

“ಕೊಟ್ಟುರು ತಾಲೂಕಿನ ರೈತರು ದಾಖಲು ಪ್ರಮಾಣದಲ್ಲಿ ಜೋಳ, ಮೆಕ್ಕೆಜೋಳ ಸೇರಿದಂತೆ ಇತರೆ ದವಸ ಧಾನ್ಯ ಹಾಗೂ ಈರುಳ್ಳಿ ಬೆಳೆದಿದ್ದಾರೆ. ಕೊಟ್ಟೂರು APMC ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರಗಳು ತೆರೆದಿಲ್ಲ, ಕಾರಣ ಶೀಘ್ರವೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ದವಸ ಧಾನ್ಯಗಳಿಗೆ ಈರುಳ್ಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಅಗತ್ಯ ಕ್ರಮ ಜರುಗಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗ ಆಗ್ರಹ

ಈ ಸಂದರ್ಭದಲ್ಲಿ ಕರಾರೈ ಸಂಘದ ಕೊಟ್ಟೂರು ತಾಲೂಕಧ್ಯಕ್ಷ ಶ್ರೀದರ್ ಎಸ್ ಒಡವಯರ್ ಸೇರಿದಂತೆ ಕೊಟ್ಟೂರು ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಅನೇಕ ರೈತರು ಇದ್ದರು.

ವರದಿ : ವಿ ಜಿ ವೃಷಭೇಂದ್ರ ಕೂಡ್ಲಿಗಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X