ನೈಸ್ ಕಂಪನಿಯ ದೌರ್ಜನ್ಯ, ಹಗರಣಗಳಿಗೆ ಉಪಮುಖ್ಯಮಂತ್ರಿ ಬೆಂಬಲ: ಕರ್ನಾಟಕ ಪ್ರಾಂತ ರೈತ ಸಂಘ ಖಂಡನೆ

Date:

Advertisements

ಹತ್ತು ಹಲವು ಅಕ್ರಮಗಳಿಗಾಗಿ ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಕಾಲತ್ತು ರೈತ ದ್ರೋಹ ಹಾಗೂ ಅಕ್ರಮ ಕೂಟದ ಬಹಿರಂಗ ಪ್ರದರ್ಶನ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿಯ ಅಧ್ಯಕ್ಷ ಜಿಸಿ ಬಯ್ಯಾರೆಡ್ಡಿ ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂಲ ಒಪ್ಪಂದ ಚೌಕಟ್ಟು ಉಲ್ಲಂಘನೆ, ಒಪ್ಪಂದ ವ್ಯಾಪ್ತಿ ಮೀರಿ ಭೂ ಕಬಳಿಕೆ, ಬಿಎಂಐಸಿ ಕ್ರಿಯಾ ಒಪ್ಪಂದದ ಉಲ್ಲಂಘನೆ, ಹೆಚ್ಚುವರಿ ಭೂಮಿ ಕಬಳಿಕೆ, ರಸ್ತೆ ನಿರ್ಮಾಣದ ಹೆಸರಿನಲ್ಲಿ ಪಡೆದ ಭೂಮಿಗಳ ರಿಯಲ್ ಎಸ್ಟೇಟ್ ಮಾರಾಟ, ಕಾನೂನು ಬಾಹಿರ ಕ್ರಮ, ದೌರ್ಜನ್ಯ, ದಬ್ಬಾಳಿಕೆ ಭ್ರಷ್ಟಾಚಾರದ ಮೂಲಕ ರೈತರ ಭೂ ಸ್ವಾಧೀನ ಮುಂತಾದ ಕೃತ್ಯಗಳು ನಡೆದಿವೆ ಎಂದರು.

ಬೆಂಗಳೂರು ಮೈಸೂರು ಮಧ್ಯೆ ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ನೈಸ್ ಯೋಜನೆ ಅಪ್ರಸ್ತುತವಾಗಿದೆ. ಯೋಜನೆ ಕಾರ್ಯಗತ ಆಗದೇ ಇದ್ದರೂ ಮೂವತ್ತು ವರ್ಷಗಳ ಹಿಂದಿನ ಕೆಐಎಡಿಬಿ ಭೂ ಸ್ವಾಧೀನವನ್ನು ಉಳಿಸಿಕೊಂಡು ಬರುತ್ತಿರುವುದು ಅನ್ಯಾಯದ ಪರಮಾವಧಿ. ನೈಸ್ ಕಂಪನಿಯ ಭೂ ಸ್ವಾಧೀನದಿಂದ ಈ ಯೋಜನೆ ವ್ಯಾಪ್ತಿಯ ರೈತರು ಅಪಾರ ಯಾತನೆ ಮತ್ತು ಸಂಕಟವನ್ನು ಅನುಭವಿಸುತ್ತಿದ್ದಾರೆ. ಅನ್ಯಾಯದ ಭೂ ಕಬಳಿಕೆ ವಿರುದ್ಧ ರಕ್ಷಣೆಗಾಗಿ ಕೋರ್ಟ್ ಕಛೇರಿಗಳಿಗೆ ಅಲೆದು ಲಕ್ಷಾಂತರ ರೂ.‌ಹಣವನ್ನು ಕಳೆದುಕೊಂಡಿದ್ದಾರೆ ಎಂದರು.

Advertisements

ರೈತರ ನೆರವಿಗೆ ನ್ಯಾಯವಾಗಿ ನಿಲ್ಲಬೇಕಾದ ಸರ್ಕಾರದ ಉಪ ಮುಖ್ಯಮಂತ್ರಿಗಳು ಕಪ್ಪು ಪಟ್ಟಿಯಲ್ಲಿ ಇರಬೇಕಾದ ಹಗರಣ -ಭ್ರಷ್ಟಾಚಾರದ ಕುಖ್ಯಾತಿಗೆ ಒಳಗಾದ ನೈಸ್ ಕಂಪನಿ ಪರವಾಗಿ ವಕಾಲತ್ತು ವಹಿಸುವುದು ಬೇಜವಾಬ್ದಾರಿ ಮತ್ತು ಅವರ ಹುದ್ದೆಗೆ ಯೋಗ್ಯವಲ್ಲದ್ದು. ಮಾತ್ರವಲ್ಲ, ಸರ್ಕಾರದ ಕಾರ್ಪೊರೇಟ್ ಲೂಟಿ ಪರ ನೀತಿಗಳಿಗಿಂತ ತಾನು ಮತ್ತಷ್ಟು ಮುಂದೆ ಇದ್ದೇನೆ ಎಂದು ತನ್ನನ್ನು ಬಿಂಬಿಸಿಕೊಳ್ಳುವ ಹೇಳಿಕೆಯೂ ಕೂಡ ಆಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ತೀವ್ರವಾದ ಆಕ್ರೋಶವನ್ನು ವ್ಯಕ್ತಪಡಿಸುತ್ತದೆ ಎಂದರು.

ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಮಾತನಾಡಿ, ತಮ್ಮ ಮಾತನ್ನು ಕೂಡಲೇ ವಾಪಸ್ಸು ಪಡೆದು ರೈತ ಸಮುದಾಯದ ಕ್ಷಮೆ ಕೋರುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರರಿಗೆ ಸಿಎಂ ಸೂಚಿಸಬೇಕು. ಟಿ ಬಿ ಜಯಚಂದ್ರ ಅಧ್ಯಕ್ಷತೆಯ ಸದನ ಸಮಿತಿ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು, ಬಿಎಂಐಸಿ ಯೋಜನೆ ರದ್ದುಪಡಿಸಿ ನೈಸ್ ಕಂಪನಿಯ ಹಗರಣ, ಭ್ರಷ್ಟಾಚಾರ, ಅಕ್ರಮಗಳನ್ನು ಶಿಕ್ಷೆಗೆ ಒಳಪಡಿಸಬೇಕು, ಹೆಚ್ಚುವರಿ ಭೂಮಿಯನ್ನು ನೈಸ್ ಕಂಪನಿಯಿಂದ ವಾಪಸ್ಸು ಪಡೆಯುವ ಸುಪ್ರೀಂ ಕೋರ್ಟ್ ತೀರ್ಪು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ ಎಂದರು.

ಉಪ ಮುಖ್ಯಮಂತ್ರಿ ರೈತ ದ್ರೋಹ ಹೇಳಿಕೆ ಖಂಡಿಸಿ ಡಿಕೆ ಶಿವಕುಮಾರ್ ಪ್ರತಿಕೃತಿ ಸುಟ್ಟು ಪ್ರತಿಭಟಿಸಲು ನೈಸ್ ಸಂತ್ರಸ್ಥ ರೈತರಿಗೆ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡುತ್ತದೆ ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X