ಮಂಡ್ಯ | ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಾರ್ಟಿಯಿಂದ ಪ್ರತಿಭಟನೆ

Date:

Advertisements

ಶಾಲಾ, ಕಾಲೇಜು ಹಾಸ್ಟೆಲುಗಳಿಗೆ ನೀರನ್ನು ಒದಗಿಸುವ ಹೊಣೆ ಸ್ಥಳೀಯ ಪಂಚಾಯಿತಿ, ಸರ್ಕಾರದ್ದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಮಕ್ಕಳು ತೊಂದರೆ ಪಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಸರಿಪಡಿಸಬೇಕು ಎಂದು ಕೆಆರ್‌ಎಸ್‌ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್‌ಗೌಡ ಆಗ್ರಹಿಸಿದರು.

ಅವರು ಮದ್ದೂರು ತಾಲೂಕಿನ ಕೆ ಎಂ ದೊಡ್ಡಿಯಲ್ಲಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಹಾಸ್ಟೆಲ್ ಬಾಲಕಿಯರಿಗೆ ಆಗುತ್ತಿರುವ ನೀರಿನ, ಊಟದ ಸಮಸ್ಯೆ ತಿಳಿದು ಇಲ್ಲಿಗೆ ಬಂದಿದ್ದೇವೆ. ಇಲ್ಲಿ ನಮ್ಮ ಗೆಳೆಯರ ಮಕ್ಕಳು ಓದುತ್ತಿದ್ದಾರೆ. ಇಲ್ಲಿ ಸರಿಯಾದ ಊಟದ, ನೀರಿನ ವ್ಯವಸ್ಥೆ ಇರುವುದಿಲ್ಲ. ಮೊದಲು ಸ್ಥಳೀಯ ಪಂಚಾಯಿತಿ ಹಾಗೂ ಹಿಂದುಳಿದ ವರ್ಗ ಇಲಾಖೆಯ ಅಧಿಕಾರಿಗಳು ಈ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Advertisements
1001715678

ವಾರ್ಡನ್ ಚಂದ್ರಕಲಾ ಮಾತನಾಡಿ, ಇಲ್ಲಿ ನೀರಿನ ಸಮಸ್ಯೆ ಇರುವುದು ನಿಜ. ಹಾಸ್ಟೆಲ್ ಬಾಡಿಗೆ ಕಟ್ಟಡದಲ್ಲಿ ಇದೆ‌. ಕಳೆದ ಒಂದು ತಿಂಗಳಿನಿಂದ ಕೊಳವೆ ಬಾವಿ ಕೆಟ್ಟ ಕಾರಣ ನೀರಿಗೆ ತೊಡಕಾಗಿದೆ. 5 ಸಾವಿರ ನೀರಿನ ಟ್ಯಾಂಕಿನ ವ್ಯವಸ್ಥೆ ಇದೆ. ಪಂಚಾಯಿತಿಗೆ 20 ದಿನಗಳ ಹಿಂದೆ ನೀರಿನ ತೊಂದರೆಯ ಬಗ್ಗೆ ಪತ್ರ ಕೊಟ್ಟಿದ್ದೇವೆ. ಅವರು ಸರಿಪಡಿಸುವ ಭರವಸೆ ನೀಡಿದ್ದಾರೆ. ಕಟ್ಟಡದ ಮಾಲೀಕರು ಹೊಸ ಕೊಳವೆಬಾವಿ ಹಾಕಿಸಲು 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಶೀಘ್ರ ನೀರಿನ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದರು.

ಪ್ರತಿಭಟನೆಯ ವಿಚಾರ ತಿಳಿದು ಸ್ಥಳೀಯ ಪಂಚಾಯಿತಿಯ ಪಿಡಿಒ ಸುಧಾ ಹಾಗೂ ಅದೇ ವಾರ್ಡಿನ ಪಂಚಾಯತಿ ಸದಸ್ಯರು ಆಗಮಿಸಿ, ನಮಗೆ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಇರಲಿಲ್ಲ. ಈಗ ತಿಳಿದು ಬಂದಿರುತ್ತದೆ. ಇನ್ನೆರಡು ದಿನಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಮುಂಚಿತವಾಗಿಯೇ ಸಮಸ್ಯೆ ಹೇಳಿದರೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ಕೆಆರ್‌ಎಸ್‌ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲೇಶ್, ಪ್ರಮೋದ್ ಮದ್ದೂರು ತಾಲ್ಲೂಕು ಅಧ್ಯಕ್ಷರು, ಮಹದೇವು ಕೂಳಗೆರೆ ಮಳವಳ್ಳಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ವಿಷಕಂಠಯ್ಯ, ರವೀಂದ್ರ ಕೊತ್ತತ್ತಿ, ವೆಂಕಟೇಶ್ ಕನಕಪುರ, ನಾಗರಾಜು ಸಾಸಲಾಪುರ, ಪುಟ್ಟಮಾಯಿಗ, ಮಾದೇಗೌಡ ಮಳವಳ್ಳಿ ಹಾಗೂ ಇನ್ನಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X