ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೆಎಸ್‌ಒಯು ಗೌರವ ಡಾಕ್ಟರೇಟ್

Date:

Advertisements

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (ಕೆಎಸ್‌ಒಯು) ಜುಲೈ 2ರಂದು ನಡೆಯಲಿರುವ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್‌ಒಯು ಉಪಕುಲಪತಿ ಶರಣಪ್ಪ ವಿ ಹಲ್ಸೆ, “ಭಾರತದ 15ನೇ ರಾಷ್ಟ್ರಪತಿ ಮುರ್ಮು ಅವರು ಬುಡಕಟ್ಟು ಸಮುದಾಯದವರಾಗಿದ್ದು, ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ಗೆ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ನಾವು ಘಟಿಕೋತ್ಸವ ಕಾರ್ಯಕ್ರಮಕ್ಕೆ ಬರುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇವೆ. ರಾಷ್ಟ್ರಪತಿಗಳ ಕಚೇರಿಯಿಂದ ನಮಗೆ ಇನ್ನೂ ದೃಢೀಕರಣ ಸಿಕ್ಕಿಲ್ಲ. ಆದರೆ, ರಾಷ್ಟ್ರಪತಿಗಳು ಜುಲೈ 3 ರಂದು ಬೆಂಗಳೂರಿನ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ನಾವು ರಾಜ್ಯಪಾಲರ ಕಚೇರಿಯಲ್ಲಿ ಅವರಿಗೆ ಪ್ರಶಸ್ತಿ ನೀಡುತ್ತೇವೆ” ಅವರು ತಿಳಿಸಿದ್ದಾರೆ.

Advertisements

ಶಿಕ್ಷಣತಜ್ಞರಾದ ಎನ್ ರಾಮಚಂದ್ರಯ್ಯ ಮತ್ತು ಎಸ್.ಎನ್ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ವಿಶ್ವವಿದ್ಯಾಲಯವು ಪ್ರಶಸ್ತಿ ನೀಡಲಿದೆ. ಜೊತೆಗೆ, ವಿದ್ಯಾರ್ಥಿಗಳಿಗೆ ಪಿಎಚ್‌ಡಿ, 44 ಚಿನ್ನದ ಪದಕಗಳು ಮತ್ತು 27 ನಗದು ಬಹುಮಾನ ಸೇರಿದಂತೆ ಹಲವಾರು ಪದವಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X