ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

Date:

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ ಮಂಜೂರಾಗಿದ್ದವು
  • ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್ ಸಂಚಾರ ಸೇವೆ ಮುಂದುವರಿಸ ಬೇಕು ಮತ್ತು ಬೇಡಿಕೆಗೆ ಅನುಗುಣವಾಗಿ ಹಲವು ಪ್ರದೇಶಗಳಿ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸ ಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

- Advertisement -

ನರ್ಮ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ, ಮಂಜೂರಾದ 35 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಬಸ್‌ ನಿಲ್ದಾಣ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್‌ಗಳು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್‌ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ ನೀಡಿದ್ದವು ಎಂದು ಡಿವೈಎಫ್‌ಐ ಮುಖಂಡರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆ ಸಂದರ್ಭ ಖಾಸಗಿ ಬಸ್ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದೆಯಾದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ನಿರ್ದೇಶನ ನೀಡಿತ್ತು. ಒಟ್ಟಾರೆ ಖಾಸಗಿ ಬಸ್‌ ಮಾಲೀಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ನರ್ಮ್ ನಗರ ಸಾರಿಗೆ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.

ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರ್ಕಾರಿ ಗ್ರಾಮಾಂತರ ಸಾರಿಗೆ ಬಸ್ಸು ನಿರಂತರ ಸೇವೆ ನೀಡಿದೆ. ಆದರೆ, ಇತ್ತೀಚೆಗೆ ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ಬಸ್ ಸಂಚಾರ ಸೇವೆ ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಸರ್ಕಾರಿ ನರ್ಮ್ ನಗರ ಸಾರಿಗೆ ಬಸ್‌ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ ಎಂದು ಮನವರಿಕೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಶಕ್ತಿ ಯೋಜನೆಗೆ ಆಟೋ ಚಾಲಕರ ಸಂಘ ವಿರೋಧ

ಜೂನ್ 11 ರಿಂದ ಆರಂಭವಾಗಿರುವ ರಾಜ್ಯದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಂಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು, ಅಂತ ಮಹಿಳೆಯರಿಗೆ ಸರ್ಕಾರದ ಈ ಯೋಜನೆಯಿಂದ ಅನುಕೂಲಕರವಾಗಲಿದೆ ಎಂದು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಮಂಗಳೂರು ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಜಿಲ್ಲಾ ಮುಖಂಡ ರಝಾಕ್ ಮೊಂಟೆಪದವು, ಉಸ್ಮಾನ್ ಕಣ್ಣೂರು, ಮುಸ್ತಫಾ ಕಲ್ಲಕಟ್ಟೆ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...