ಕೆಎಸ್‌ಆರ್‌ಟಿಸಿ | ಕಲ್ಯಾಣ ಯೋಜನೆಯ ಪರಿಹಾರ ಮೊತ್ತ ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ ಮಾಡಲಾಗಿದೆ. ಇದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲು ಎಂದು ನಿಗಮ ತಿಳಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ, “ನಿಗಮದಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ₹1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ₹1 ಕೋಟಿ ನೀಡಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಇದೀಗ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ  ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ₹3 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸಲು ನಾನಾ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು₹3 ಲಕ್ಷದಿಂದ ₹10ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ₹7 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

“ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ, ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ  ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ. ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ₹100 ಗಳಿಂದ ₹200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ ₹50 ಗಳ ವಂತಿಕೆಯನ್ನು ₹100 ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ” ಎಂದು ತಿಳಿಸಿದೆ.

“ಈ ಪರಿಷ್ಕೃತ ಆದೇಶವು ನವೆಂಬರ್ 1ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...