ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ; ಮೇಲಾಧಿಕಾರಿ ಕಿರುಕುಳ ಆರೋಪ

Date:

Advertisements

ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ಆತ್ಮಹತ್ಯೆಗೆ ಯತ್ನಿಸಿರುವ ಉದ್ಯೋಗಿ. ಅವರು ಸಾರಿಗೆ ಇಲಾಖೆಯ ಜಿಲ್ಲಾ ವಿಭಾಗಾಧಿಕಾರಿ ಅವರಿಗೆ ಪತ್ರ ಬರೆದಿದ್ದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪತ್ರದಲ್ಲಿ ಮಡಿಕೇರಿ ಡಿಪೇ ಮ್ಯಾನೇಜರ್ ಗೀತಾ ಅವರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisements

ಅಭಿಷೇಕ್‌ ಅವರು ಮಡಿಕೇರಿ ಡಿಪೋದಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮಗೆ ಗೀತಾ ಅವರು ಕಳೆದ ಮೂರ್ನಾಲ್ಕು ವರ್ಷಗಳಿಂದ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

WhatsApp Image 2023 08 30 at 7.36.28 AM

“ಗೀತಾ ಅವರು ಹಿಂದಿನ ಸರ್ಕಾರದಲ್ಲಿ ಜಿಲ್ಲೆಯ ಶಾಸಕರ ನೆರವು ಪಡೆದು ನೆಲೆ ಕಂಡುಕೊಂಡಿದ್ದಾರೆ. ಅವರ ವಿರುದ್ಧ ವ್ಯಾಪಕ ದೂರುಗಳು ಇದ್ದರೂ, ಮಾಜಿ ಶಾಸಕರ ನೆರವಿನಿಂದ ಇಲ್ಲೇ ಉಳಿದಿದ್ದಾರೆ. ಅವರನ್ನು ವರ್ಗಾವಣೆ ಮಾಡಿ ಹೊಸ ಸರ್ಕಾರ ಆದೇಶಿಸಿದೆ. ಆದರೂ, ಗೀತಾ ಅವರು ತಮ್ಮ ಪ್ರಭಾವ ಬಳಸಿ, ಜಿಲ್ಲೆಯ ಇಬ್ಬರೂ ಶಾಸಕರ ಮನವೊಲಿಸಿ, ಇಲ್ಲೇ ಮುಂದುವರೆಯಲು ಶಿಫಾರಸ್ಸು ಮಾಡಿಸಿಕೊಂಡಿದ್ದಾರೆ” ಎಂದು ಪತ್ರದಲ್ಲಿ ಆರೋಪಪಿಸಿದ್ದಾರೆ.

“ಗೀತಾ ಅವರ ಕಿರುಕುಳವನ್ನು ಸಹಿಸಲಾರದೆ ಹಾಗೂ ಹಾಲಿ ಶಾಸಕರುಗಳು ಕೂಡ ಇವರ ಬಗ್ಗೆ ಮೃದು ಧೋರಣೆ ಅನುಸರಿಸಿದನ್ನು ಕಂಡು ಬೇಸಿತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಅವರು ದೂರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X