ಕೂಡ್ಲಿಗಿ | ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಶ್ರೀನಿವಾಸ್

Date:

Advertisements

ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್ ಟಿ ಶ್ರೀನಿವಾಸ್‌ ಅವರು, ಗುಡೇಕೋಟೆ, ಹೊಸಹಳ್ಳಿ, ಕೂಡ್ಲಿಗಿ ಹೋಬಳಿ ವ್ಯಾಪ್ತಿಗಳ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪಕ್ಷದ ಕಾರ್ಯಕರ್ತದ ಅಹವಾಲುಗಳನ್ನು ಸ್ವೀಕರಿಸಿದರು.

ಪಟ್ಟಣದಲ್ಲಿ ಮಾ.19ರಂದು ಜರುಗಿದ್ದ ಅಗ್ನಿ ಅವಘಡದಲ್ಲಿ ನಷ್ಟಕ್ಕೀಡಾಗಿದ್ದ ರೈತನ ಕುಟುಂಬಸ್ಥರು ಶಾಸಕರನ್ನು ಸಂಪರ್ಕಿಸಿ ಪರಿಹಾರಕ್ಕಾಗಿ ಮನವಿ ಮಾಡಿದರು. ಅವರ ಮನವಿ ಸ್ವೀಕರಿಸಿ ಅಹವಾಲು ಆಲಿಸಿದ ಅವರು, ಸಂಬಂಧಿಸಿದ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದೆಂದು ಭರವಸೆ ನೀಡಿದರು. ವೈಯಕ್ತಿಕವಾಗಿ ತುರ್ತು ಹಣದ ನೆರವು ನೀಡಿ ಸಂತೈಸಿದರು.

ಬಳಿಕ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು. ಕರ್ತವ್ಯದಲ್ಲಿ ಸಮನ್ವಯ ಸಾಧಿಸಿಕೊಂಡು ಸೇವೆಯಲ್ಲಿ ಸಮರ್ಪಕತೆ ಕಾಪಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements
WhatsApp Image 2025 03 29 at 11.16.42 AM 1

ಇದನ್ನೂ ಓದಿ: ವಿಜಯನಗರ | ಕೂಡ್ಲಿಗಿ ಬಳಿ ಶಾಲಾ ವಾಹನ ಡಿಕ್ಕಿ; ಶಿಕ್ಷಕ ಮೃತ್ಯು

ಕುಂದು ಕೊರತೆ ಸಭೆಯಲ್ಲಿ ತಹಶೀಲ್ದಾರ್‌ ವಿ ಕೆ ನೇತ್ರಾವತಿ, ಡಿವೈಎಸ್‌ಪಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಂಜಪ್ಪ, ಹೊಸಹಳ್ಳಿ ಗುಡೇಕೋಟೆ ಹೋಬಳಿಯ ವಿವಿಧ ಮುಖಂಡರು, ಸಾರ್ವಜನಿಕರು ರೈತರು ಪಕ್ಷದ ಮುಖಂಡರು ಕಾರ್ಯಕರ್ತರು, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ ಸೇರಿದಂತೆ ಕ್ಷೇತ್ರದ ಜನಪ್ರತಿನಿಧಿಗಳು, ಮುಖಂಡರಾದ ಗುರುಸಿದ್ದನಗೌಡ, ತಾಪಂ ನಿವೃತ್ತ ಅಧಿಕಾರಿ ಜಿ.ಎಮ್.ಬಸಣ್ಣ, ನರಸಿಂಹಗಿರಿ ವೆಂಕಟೇಶ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X